July 23, 2026
Uncategorizedರಾಜಕೀಯ

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

ಬೆಳ್ತಂಗಡಿ: ಇಂದು ಗುರುವಾಯನಕೆರೆಯ ಶಕ್ತಿನಗರದಲ್ಲಿ ನಡೆಯಲಿರುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಎಂಬ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ನ್ನು ಕಿಡಿಗೇಡಿಗಳು ಹರಿದ ಘಟನೆ ಗುರುವಾಯನಕೆರೆಯಲ್ಲಿ ನಡೆದಿದೆ.

ಸಮಾವೇಶದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ , ಸಚಿವರಾದ ಚೆಲುವರಾಯ ಸ್ವಾಮಿ , ದಿನೇಶ್ ಗುಂಡೂರಾವ್ ಸೇರಿದಂತೆ ರಾಜ್ಯ ಮಟ್ಟದ ಹಲವಾರು ನಾಯಕರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಹತ್ತಾರು ದಿನಗಳಿಂದ ತಾಲುಕಿನಾದ್ಯಂತ ವ್ಯಾಪಕ ಪ್ರಮಾಣದ ಪ್ರಚಾರ ಬ್ಯಾನರ್ , ಪಕ್ಷದ ಧ್ವಜಗಳು ಸೇರಿದಂತೆ ಬಂಟಿಂಕ್ಸ್ ಗಳನ್ನು ಅಳವಡಿಸಲಾಗಿತ್ತು.

ಕಳೆದ ರಾತ್ರಿ ಗುರುವಾಯನಕೆರೆ ಎಂಬಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಘಟನೆಯನ್ನು ಖಂಡಿಸಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ” ಪಕ್ಷದ ಬೆಳವಣಿಗೆಯನ್ನು ಸಹಿಸದೆ ಬಿಜೆಪಿ ಕಾರ್ಯಕರ್ತರು ಹತಾಶೆಯಿಂದ ಈ ಕಾರ್ಯ ನಡೆಸಿದ್ದಾರೆ. ಇಂತಹ ಕಾರ್ಯದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಮತ್ತು ಪಕ್ಷವನ್ನು ಬೆದರಿಸಲು ಸಾಧ್ಯವಿಲ್ಲ. ನೀವು ಚಿವುಟಿದಷ್ಟು ನಾವು ಚಿಗುರುತ್ತೇವೆ ಇಂದಿನ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯುತ್ತದೆ ಎಂದಿದ್ದಾರೆ.

Related posts

ಲಾಯಿಲ ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ ಕಸ ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್ ಕಾರ್ಯಕ್ಕೆ ಮೆಚ್ಚುಗೆ:

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಜನಸ್ಪಂದನ ಸಭೆಗೆ ಸ್ಪಂದನೆ ನೀಡದ ಬಾರ್ಯ ಗ್ರಾಮ ಪಂಚಾಯತ್ ಆಡಳಿತ: ಪಿಡಿಒ ವಿರುದ್ಧ ಶಾಸಕರು ಗರಂ

Suddi Udaya

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ಅರಿಕೆಗುಡ್ಡೆಯಲ್ಲಿ ನೂತನ ಸಭಾಭವನ ಉದ್ಘಾಟನೆ : ಸುಬ್ರಹ್ಮಣ್ಯ ಶ್ರೀಗಳಿಂದ ಸಭಾಭವವನ್ನು ದೀಪ ಬೆಳಗಿಸಿ , ಉದ್ಘಾಟಿಸಿ ನಾಮಫಲಕ ಅನಾವರಣ

Suddi Udaya

ಮಳೆ ಹಿನ್ನಲೆ-ನಾಳೆ (ಜು. 18)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Suddi Udaya
error: Content is protected !!