25.7 C
ಪುತ್ತೂರು, ಬೆಳ್ತಂಗಡಿ
April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆ ಲೋಕಾರ್ಪಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಅತಿ ದೊಡ್ಡ ಆಭರಣ ಮಳಿಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಇದರ ನವೀಕೃತ ಮಳಿಗೆಯನ್ನು ಎ.20ರ ರವಿವಾರ ಖ್ಯಾತ ನಟ, ಮುಳಿಯ ಸಂಸ್ಥೆಯ ನೂತನ ರಾಯಭಾರಿ ರಮೇಶ್‌ ಅರವಿಂದ್ ಉದ್ಘಾಟಿಸಿದರು.

ರವಿವಾರ ಬೆಳಗ್ಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆನಂತರ ದೇವರ ದೀಪದೊಂದಿಗೆ ಮೆರವಣಿಗೆ ಮೂಲಕ ಕೋರ್ಟ್‌ ರಸ್ತೆಯಲ್ಲಿರುವ ಶೋರೂಂಗೆ ಆಗಮಿಸಿದರು.

ಮುಳಿಯ ಸಂಸ್ಥೆಯ ನೂತನ ರಾಯಭಾರಿ ರಮೇಶ್‌ ಅರವಿಂದ್, ಬಲೂನ್ ಹಾರಿಸಿ, ಕರ್ಟನ್ ರೈಸ್‌ ಮಾಡಿದರು. ಬಳಿಕ ದೀಪ ಬೆಳಗಿಸಿ, ವಿದ್ಯುಕ್ತವಾಗಿ ಉದ್ಘಾಟನೆ ಮಾಡಲಾಯಿತು.

1944 ರಲ್ಲಿ ಪ್ರಾರಂಭಗೊಂಡ ಮುಳಿಯ ಜ್ಯುವೆಲ್ಸ್, ಪುತ್ತೂರಿನಲ್ಲಿ 10000 ಚದರ ಅಡಿಯ ವಿಶಾಲ ಶೋರೂಂ ಅನ್ನು ತೆರೆಯಲಾಗಿದೆ. ನಾಲ್ಕು ಅಂತಸ್ತಿ ನಲ್ಲಿ ಚಿನ್ನ, ಬೆಳ್ಳಿ, ವಜ್ರ, ಆಧುನಿಕ ಬ್ರಾಂಡೆಡ್ ವಾಚುಗಳು, ಗಿಫ್ಟ್ ಐಟಂ, ಚಿನ್ನಾಭರಣಗಳ ಕೌಂಟರ್‌ಗಳನ್ನು ಹೊಂದಿರಲಿವೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಎಂಬಂತೆ ಗ್ರಾಹಕರಿಗೆ ಮಳಿಗೆಯಲ್ಲೇ ಉಚಿತ ಊಟ, ಉಪಾಹಾರಗಳನ್ನು ಆರಂಭಿಸಲಾಗಿದೆ.

ಮಧ್ಯಾಹ್ನ 12 ರಿಂದ 2.30 ರ ಒಳಗೆ ಆಭರಣ ಖರೀದಿಗೆ ಬರುವ ಗ್ರಾಹಕರಿಗೆ ಊಟ, ಸಂಜೆ 4 ರಿಂದ 6.30 ರ ಒಳಗೆ ಬರುವವರಿಗೆ ಉಪಾಹಾರ ವ್ಯವಸ್ಥೆ ಇರಲಿದೆ.ಜತೆಗೆ ಮಕ್ಕಳ ಆಟ, ಆರೈಕೆಗೆ ವಿಶೇಷ ಕೊಠಡಿ, ವ್ಯಾಲೆಟ್ ಪಾರ್ಕಿಂಗ್, ವಾಚ್ ಕೌಂಟ ರ್, ಬೆಳ್ಳಿಯ ಆಭರಣಗಳ ಸಿಲ್ವರಿಯ ಕೌಂಟ‌ರ್, ವಜ್ರಾಭರಣ ಅಮೂಲ್ಯ ಕೌಂಟ‌ರ್, ಗೋಲ್ಡ್‌ ಪ್ಯೂರಿಟಿ ಅನಲೈಸರ್ ಹಾಗೂ ಡೈಮಂಡ್ ಡಿಟೆಕ್ಟ‌ರ್ ಟೆಸ್ಟಿಂಗ್ ಮಿಷನ್ ಸೌಲಭ್ಯಗಳಿವೆ.

Related posts

ಮುಂಡಾಜೆ ಪಿಯು ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಕಲ್ಲೇರಿ: ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಮದ್ದಡ್ಕ  : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ: ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್

Suddi Udaya
error: Content is protected !!