25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆ ಲೋಕಾರ್ಪಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಅತಿ ದೊಡ್ಡ ಆಭರಣ ಮಳಿಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಇದರ ನವೀಕೃತ ಮಳಿಗೆಯನ್ನು ಎ.20ರ ರವಿವಾರ ಖ್ಯಾತ ನಟ, ಮುಳಿಯ ಸಂಸ್ಥೆಯ ನೂತನ ರಾಯಭಾರಿ ರಮೇಶ್‌ ಅರವಿಂದ್ ಉದ್ಘಾಟಿಸಿದರು.

ರವಿವಾರ ಬೆಳಗ್ಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆನಂತರ ದೇವರ ದೀಪದೊಂದಿಗೆ ಮೆರವಣಿಗೆ ಮೂಲಕ ಕೋರ್ಟ್‌ ರಸ್ತೆಯಲ್ಲಿರುವ ಶೋರೂಂಗೆ ಆಗಮಿಸಿದರು.

ಮುಳಿಯ ಸಂಸ್ಥೆಯ ನೂತನ ರಾಯಭಾರಿ ರಮೇಶ್‌ ಅರವಿಂದ್, ಬಲೂನ್ ಹಾರಿಸಿ, ಕರ್ಟನ್ ರೈಸ್‌ ಮಾಡಿದರು. ಬಳಿಕ ದೀಪ ಬೆಳಗಿಸಿ, ವಿದ್ಯುಕ್ತವಾಗಿ ಉದ್ಘಾಟನೆ ಮಾಡಲಾಯಿತು.

1944 ರಲ್ಲಿ ಪ್ರಾರಂಭಗೊಂಡ ಮುಳಿಯ ಜ್ಯುವೆಲ್ಸ್, ಪುತ್ತೂರಿನಲ್ಲಿ 10000 ಚದರ ಅಡಿಯ ವಿಶಾಲ ಶೋರೂಂ ಅನ್ನು ತೆರೆಯಲಾಗಿದೆ. ನಾಲ್ಕು ಅಂತಸ್ತಿ ನಲ್ಲಿ ಚಿನ್ನ, ಬೆಳ್ಳಿ, ವಜ್ರ, ಆಧುನಿಕ ಬ್ರಾಂಡೆಡ್ ವಾಚುಗಳು, ಗಿಫ್ಟ್ ಐಟಂ, ಚಿನ್ನಾಭರಣಗಳ ಕೌಂಟರ್‌ಗಳನ್ನು ಹೊಂದಿರಲಿವೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಎಂಬಂತೆ ಗ್ರಾಹಕರಿಗೆ ಮಳಿಗೆಯಲ್ಲೇ ಉಚಿತ ಊಟ, ಉಪಾಹಾರಗಳನ್ನು ಆರಂಭಿಸಲಾಗಿದೆ.

ಮಧ್ಯಾಹ್ನ 12 ರಿಂದ 2.30 ರ ಒಳಗೆ ಆಭರಣ ಖರೀದಿಗೆ ಬರುವ ಗ್ರಾಹಕರಿಗೆ ಊಟ, ಸಂಜೆ 4 ರಿಂದ 6.30 ರ ಒಳಗೆ ಬರುವವರಿಗೆ ಉಪಾಹಾರ ವ್ಯವಸ್ಥೆ ಇರಲಿದೆ.ಜತೆಗೆ ಮಕ್ಕಳ ಆಟ, ಆರೈಕೆಗೆ ವಿಶೇಷ ಕೊಠಡಿ, ವ್ಯಾಲೆಟ್ ಪಾರ್ಕಿಂಗ್, ವಾಚ್ ಕೌಂಟ ರ್, ಬೆಳ್ಳಿಯ ಆಭರಣಗಳ ಸಿಲ್ವರಿಯ ಕೌಂಟ‌ರ್, ವಜ್ರಾಭರಣ ಅಮೂಲ್ಯ ಕೌಂಟ‌ರ್, ಗೋಲ್ಡ್‌ ಪ್ಯೂರಿಟಿ ಅನಲೈಸರ್ ಹಾಗೂ ಡೈಮಂಡ್ ಡಿಟೆಕ್ಟ‌ರ್ ಟೆಸ್ಟಿಂಗ್ ಮಿಷನ್ ಸೌಲಭ್ಯಗಳಿವೆ.

Related posts

ಅಕ್ರಮ ಕೋಳಿ ಅಂಕ- ಧರ್ಮಸ್ಥಳ ಪೊಲೀಸರ ದಾಳಿ: ಏಳು ಆರೋಪಿಗಳ ಬಂಧನ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಕಲ್ಮಂಜ: ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಅಂಡಿಂಜೆ: ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ ನಿಧನ

Suddi Udaya
error: Content is protected !!