September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆ ಲೋಕಾರ್ಪಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಅತಿ ದೊಡ್ಡ ಆಭರಣ ಮಳಿಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಇದರ ನವೀಕೃತ ಮಳಿಗೆಯನ್ನು ಎ.20ರ ರವಿವಾರ ಖ್ಯಾತ ನಟ, ಮುಳಿಯ ಸಂಸ್ಥೆಯ ನೂತನ ರಾಯಭಾರಿ ರಮೇಶ್‌ ಅರವಿಂದ್ ಉದ್ಘಾಟಿಸಿದರು.

ರವಿವಾರ ಬೆಳಗ್ಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆನಂತರ ದೇವರ ದೀಪದೊಂದಿಗೆ ಮೆರವಣಿಗೆ ಮೂಲಕ ಕೋರ್ಟ್‌ ರಸ್ತೆಯಲ್ಲಿರುವ ಶೋರೂಂಗೆ ಆಗಮಿಸಿದರು.

ಮುಳಿಯ ಸಂಸ್ಥೆಯ ನೂತನ ರಾಯಭಾರಿ ರಮೇಶ್‌ ಅರವಿಂದ್, ಬಲೂನ್ ಹಾರಿಸಿ, ಕರ್ಟನ್ ರೈಸ್‌ ಮಾಡಿದರು. ಬಳಿಕ ದೀಪ ಬೆಳಗಿಸಿ, ವಿದ್ಯುಕ್ತವಾಗಿ ಉದ್ಘಾಟನೆ ಮಾಡಲಾಯಿತು.

1944 ರಲ್ಲಿ ಪ್ರಾರಂಭಗೊಂಡ ಮುಳಿಯ ಜ್ಯುವೆಲ್ಸ್, ಪುತ್ತೂರಿನಲ್ಲಿ 10000 ಚದರ ಅಡಿಯ ವಿಶಾಲ ಶೋರೂಂ ಅನ್ನು ತೆರೆಯಲಾಗಿದೆ. ನಾಲ್ಕು ಅಂತಸ್ತಿ ನಲ್ಲಿ ಚಿನ್ನ, ಬೆಳ್ಳಿ, ವಜ್ರ, ಆಧುನಿಕ ಬ್ರಾಂಡೆಡ್ ವಾಚುಗಳು, ಗಿಫ್ಟ್ ಐಟಂ, ಚಿನ್ನಾಭರಣಗಳ ಕೌಂಟರ್‌ಗಳನ್ನು ಹೊಂದಿರಲಿವೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಎಂಬಂತೆ ಗ್ರಾಹಕರಿಗೆ ಮಳಿಗೆಯಲ್ಲೇ ಉಚಿತ ಊಟ, ಉಪಾಹಾರಗಳನ್ನು ಆರಂಭಿಸಲಾಗಿದೆ.

ಮಧ್ಯಾಹ್ನ 12 ರಿಂದ 2.30 ರ ಒಳಗೆ ಆಭರಣ ಖರೀದಿಗೆ ಬರುವ ಗ್ರಾಹಕರಿಗೆ ಊಟ, ಸಂಜೆ 4 ರಿಂದ 6.30 ರ ಒಳಗೆ ಬರುವವರಿಗೆ ಉಪಾಹಾರ ವ್ಯವಸ್ಥೆ ಇರಲಿದೆ.ಜತೆಗೆ ಮಕ್ಕಳ ಆಟ, ಆರೈಕೆಗೆ ವಿಶೇಷ ಕೊಠಡಿ, ವ್ಯಾಲೆಟ್ ಪಾರ್ಕಿಂಗ್, ವಾಚ್ ಕೌಂಟ ರ್, ಬೆಳ್ಳಿಯ ಆಭರಣಗಳ ಸಿಲ್ವರಿಯ ಕೌಂಟ‌ರ್, ವಜ್ರಾಭರಣ ಅಮೂಲ್ಯ ಕೌಂಟ‌ರ್, ಗೋಲ್ಡ್‌ ಪ್ಯೂರಿಟಿ ಅನಲೈಸರ್ ಹಾಗೂ ಡೈಮಂಡ್ ಡಿಟೆಕ್ಟ‌ರ್ ಟೆಸ್ಟಿಂಗ್ ಮಿಷನ್ ಸೌಲಭ್ಯಗಳಿವೆ.

Related posts

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಬಂದಾರು ಗ್ರಾಮ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಪ. ಪೂ. ಕಾಲೇಜು: ಜಾಗೃತ ಜಾಗೃತಿ ಸಪ್ತಾಹ

Suddi Udaya

ಬಿ.ಸಿ.ರೋಡ್ ಬಸ್‌ ನಿಲ್ದಾಣದಲ್ಲಿ ಯುವತಿಯ ಹತ್ಯೆ : ಆರೋಪಿ ಪರಾರಿ

Suddi Udaya

ಕರಾಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ-ಅನುಜ್ಞಾ ಕಲಶ

Suddi Udaya

ಅಳದಂಗಡಿ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!