July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆ ಲೋಕಾರ್ಪಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಅತಿ ದೊಡ್ಡ ಆಭರಣ ಮಳಿಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಇದರ ನವೀಕೃತ ಮಳಿಗೆಯನ್ನು ಎ.20ರ ರವಿವಾರ ಖ್ಯಾತ ನಟ, ಮುಳಿಯ ಸಂಸ್ಥೆಯ ನೂತನ ರಾಯಭಾರಿ ರಮೇಶ್‌ ಅರವಿಂದ್ ಉದ್ಘಾಟಿಸಿದರು.

ರವಿವಾರ ಬೆಳಗ್ಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆನಂತರ ದೇವರ ದೀಪದೊಂದಿಗೆ ಮೆರವಣಿಗೆ ಮೂಲಕ ಕೋರ್ಟ್‌ ರಸ್ತೆಯಲ್ಲಿರುವ ಶೋರೂಂಗೆ ಆಗಮಿಸಿದರು.

ಮುಳಿಯ ಸಂಸ್ಥೆಯ ನೂತನ ರಾಯಭಾರಿ ರಮೇಶ್‌ ಅರವಿಂದ್, ಬಲೂನ್ ಹಾರಿಸಿ, ಕರ್ಟನ್ ರೈಸ್‌ ಮಾಡಿದರು. ಬಳಿಕ ದೀಪ ಬೆಳಗಿಸಿ, ವಿದ್ಯುಕ್ತವಾಗಿ ಉದ್ಘಾಟನೆ ಮಾಡಲಾಯಿತು.

1944 ರಲ್ಲಿ ಪ್ರಾರಂಭಗೊಂಡ ಮುಳಿಯ ಜ್ಯುವೆಲ್ಸ್, ಪುತ್ತೂರಿನಲ್ಲಿ 10000 ಚದರ ಅಡಿಯ ವಿಶಾಲ ಶೋರೂಂ ಅನ್ನು ತೆರೆಯಲಾಗಿದೆ. ನಾಲ್ಕು ಅಂತಸ್ತಿ ನಲ್ಲಿ ಚಿನ್ನ, ಬೆಳ್ಳಿ, ವಜ್ರ, ಆಧುನಿಕ ಬ್ರಾಂಡೆಡ್ ವಾಚುಗಳು, ಗಿಫ್ಟ್ ಐಟಂ, ಚಿನ್ನಾಭರಣಗಳ ಕೌಂಟರ್‌ಗಳನ್ನು ಹೊಂದಿರಲಿವೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಎಂಬಂತೆ ಗ್ರಾಹಕರಿಗೆ ಮಳಿಗೆಯಲ್ಲೇ ಉಚಿತ ಊಟ, ಉಪಾಹಾರಗಳನ್ನು ಆರಂಭಿಸಲಾಗಿದೆ.

ಮಧ್ಯಾಹ್ನ 12 ರಿಂದ 2.30 ರ ಒಳಗೆ ಆಭರಣ ಖರೀದಿಗೆ ಬರುವ ಗ್ರಾಹಕರಿಗೆ ಊಟ, ಸಂಜೆ 4 ರಿಂದ 6.30 ರ ಒಳಗೆ ಬರುವವರಿಗೆ ಉಪಾಹಾರ ವ್ಯವಸ್ಥೆ ಇರಲಿದೆ.ಜತೆಗೆ ಮಕ್ಕಳ ಆಟ, ಆರೈಕೆಗೆ ವಿಶೇಷ ಕೊಠಡಿ, ವ್ಯಾಲೆಟ್ ಪಾರ್ಕಿಂಗ್, ವಾಚ್ ಕೌಂಟ ರ್, ಬೆಳ್ಳಿಯ ಆಭರಣಗಳ ಸಿಲ್ವರಿಯ ಕೌಂಟ‌ರ್, ವಜ್ರಾಭರಣ ಅಮೂಲ್ಯ ಕೌಂಟ‌ರ್, ಗೋಲ್ಡ್‌ ಪ್ಯೂರಿಟಿ ಅನಲೈಸರ್ ಹಾಗೂ ಡೈಮಂಡ್ ಡಿಟೆಕ್ಟ‌ರ್ ಟೆಸ್ಟಿಂಗ್ ಮಿಷನ್ ಸೌಲಭ್ಯಗಳಿವೆ.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಕಾಮರ್ಸ್ ಕ್ಯಾಂಪಸ್’ ಅಸೋಸಿಯೇಷನ್ ಪದಗ್ರಹಣ ಸಮಾರಂಭ

Suddi Udaya

ಸಂದೀಪ್ ಸುಂದರ್ ನೀರಲ್ಕೆರವರಿಂದ ಬಡಗಕಾರಂದೂರು ಶಾಲೆಗೆ ಕಂಪ್ಯೂಟರ್ ಟೇಬಲ್ ಗಳ ಕೊಡುಗೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.366 ಕೋಟಿ ವಾರ್ಷಿಕ ವ್ಯವಹಾರ, ರೂ.1ಕೋಟಿ 64 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 16 ಡಿವಿಡೆಂಟ್

Suddi Udaya

ಪಡಂಗಡಿ- ಸೋಣಂದೂರು- ಮಾಲಾಡಿ ಬಿಜೆಪಿ ಗ್ರಾಮ ಸಮಿತಿಯಿಂದ ನಡೆದಗರ್ಡಾಡಿ-ಸೋಣಂದೂರು – ಮಾಲಾಡಿ ಕೊಲ್ಪೆದಬೈಲು ಸಂಪರ್ಕ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಜೊತೆಗೂಡಿ ನಡೆಸಲಾದ ಶ್ರಮದಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya

ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಬೆಳ್ತಂಗಡಿ: 51 ನಾಯಿ ಮರಿಗಳು, 32 ಬೆಕ್ಕು ಮರಿಗಳ ದತ್ತು ಸ್ವೀಕಾರ

Suddi Udaya
error: Content is protected !!