24.4 C
ಪುತ್ತೂರು, ಬೆಳ್ತಂಗಡಿ
June 8, 2025
ಕ್ರೀಡಾ ಸುದ್ದಿ

ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ, ಬಂಟರ ಯುವ ವಿಭಾಗ ಮತ್ತು ಬಂಟರ ಮಹಿಳಾ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಪಣೆಜಾಲ್ ಇಂಡೋರ್ ಲಯನ್ಸ್ ಕ್ರೀಡಾಂಗಣದಲ್ಲಿ ಬಂಟರ ಇಂಡೋರ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

ಬೆಳ್ತಂಗಡಿ :ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ, ಬಂಟರ ಯುವ ವಿಭಾಗ ಮತ್ತು ಬಂಟರ ಮಹಿಳಾ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಪಣೆಜಾಲ್ ಇಂಡೋರ್ ಲಯನ್ಸ್ ಕ್ರೀಡಾಂಗಣದಲ್ಲಿ ಬಂಟರ ಇಂಡೋರ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಿತು.

ಇದರ ಉದ್ಘಾಟನೆಯನ್ನು ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ. ಅಧ್ಯಕ್ಷರು, ಲಯನ್ಸ್ ಕ್ಲಬ್ ಬೆಳ್ತಂಗಡಿ, ಅಧ್ಯಕ್ಷತೆಯನ್ನು ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಬಿ. ಜಯಂತ ಶೆಟ್ಟಿ ಭಂಡಾರಿಗುಡ್ಡೆಯವರು ವಹಿಸಿಕೊಂಡರು. ಮುಖ್ಯ ಅತಿಥಿಗಳಾಗಿ ಶ್ರೀ ಶೇಖರ್ ಶೆಟ್ಟಿ ಮನಸ್ವಿ ಪಣೆಜಾಲು ಉದ್ಯಮಿಗಳು ಶ್ರೀ ಜಯಂತ ಶೆಟ್ಟಿ ಕುಂಟಿನಿ ಉಪಾಧ್ಯಕ್ಷರು, ವಿಜಯ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ಗುರುವಾಯನಕೆರೆ, ಶ್ರೀ ಪುಷ್ಪರಾಜ್ ಶೆಟ್ಟಿ ಬೆಳ್ತಂಗಡಿ, ಸಂಚಾಲಕರು ಯುವ ಬಂಟ ವಿಭಾಗ ಇವರು ಭಾಗವಹಿದ್ದರು. ವೇದಿಕೆಯಲ್ಲಿ ಶ್ರೀ ವಸಂತ ಶೆಟ್ಟಿ ಶ್ರದ್ದಾ ಕೋಶಾಧಿಕಾರಿ ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ಶ್ರೀ ಜಯರಾಮ ಭಂಡಾರಿ ಧರ್ಮಸ್ಥಳ, ಸಂಚಾಲಕರು ಬಂಟರ ಯಾನೆ ನಾಡವರ ಮಾತೃ ಸಂಘ (ರಿ ) ಮಂಗಳೂರು, ಶ್ರೀ ರಘುರಾಮ ಶೆಟ್ಟಿ ಸಾಧನ, ಮಾಜಿ ಅಧ್ಯಕ್ಷರು ಬಂಟರ ಸಂಘ ಬೆಳ್ತಂಗಡಿ, ಶ್ರೀಮತಿ ವನಿತಾ ವಿ. ಶೆಟ್ಟಿ ಅಧ್ಯಕ್ಷರು, ಉಜಿರೆ ವಲಯ, ಶ್ರೀ ಆನಂದ ಶೆಟ್ಟಿ ಐಸಿರಿ, ನಿರ್ದೇಶಕರು ಬಂಟರ ಸಂಘ ಬೆಳ್ತಂಗಡಿ ,ವೆಂಕಟ್ರಮಣ ಶೆಟ್ಟಿ ಉಜಿರೆ ಕ್ರೀಡಾ ಸಂಚಾಲಕರು ಬಂಟರ ಸಂಘ ಬೆಳ್ತಂಗಡಿ ಉಪಸ್ಥಿತರಿದ್ದರು. ಶ್ರೀ ರಾಜು ಶೆಟ್ಟಿ ಬೆಂಗತ್ಯಾರ್ ಸ್ವಾಗತಿಸಿದರು. ಶ್ರೀ ಸುರೇಶ್ ಶೆಟ್ಟಿ ಲಾಯಿಲ ಧನ್ಯವಾದವಿತ್ತರು. ಶ್ರೀ ಕಿರಣ್ eಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ಈ ಪಂದ್ಯಾಟದಲ್ಲಿ ತಾಲೂಕಿನ ಬಂಟ ಸಮಾಜದ 40 ತಂಡಗಳು ಭಾಗವಹಿಸಿದ್ದವು.

Related posts

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಂಗಳೂರು ವಿ.ವಿ. ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ .ಡಿ.ಎಂ.ಕಾಲೇಜಿಗೆ ಪ್ರಶಸ್ತಿ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟ

Suddi Udaya

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya
error: Content is protected !!