April 21, 2025
ಅಪರಾಧ ಸುದ್ದಿ

ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ ಶಾಂತಿ ಭಂಗ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ; ಉಜಿರೆಯಲ್ಲಿ
ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ ಶಾಂತಿ ಭಂಗ ಆರೋಪ
ಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎ.19ರಂದು ಪ್ರಕರಣ ದಾಖಲಿಸಲಾಗಿದೆ.

ಉಜಿರೆ ನಿವಾಸಿಗಳಾದ ಅನಿಲ್ ಅಂತರ, ಮನೋಜ್ ಕುಂಜರ್ಪ, ಪ್ರಜ್ವಲ್ ಗೌಡ, ಪ್ರಭಾಕರ, ಗಣೇಶ್ ಹಾಗೂ ಇತರರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿ ಪೊಲೀಸ್‌ ಠಾಣೆಯ ಎಸ್. ಐ ಮುರಳೀಧರ ನಾಯ್ಕ ಕೆ.ಜಿ ಅವರ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.

ಪುನೀತ್ ಕೇರೆಹಳ್ಳಿ ಅವರು ಉಜಿರೆಗೆ ಬಂದರೆ ಉಜಿರೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ಶಾಂತಿ ಭಂಗ ಉಂಟುಮಾಡುವ ಸಾಧ್ಯತೆ ಇದ್ದ ಕಾರಣ ದ.ಕ ಜಿಲ್ಲಾಧಿಕಾರಿಯವರು ಸರ್ವಜನಿ ಹಿತದೃಷ್ಟಿಯಿಂದ ಪುನೀತ್ ಕೇರೆಹಳ್ಳಿ ಗೆ ಜಿಲ್ಲೆಯ ಸರಹದ್ದಿನೊಳಗೆ ಪ್ರವೇಶಿಸದಂತೆ ಕಲಂ163 ಬಿ.ಎನ್.ಎಸ್ 2023 ರಂತೆ ನಿರ್ಭಂಧಿಸಿ ಮಾನ್ಯ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರು. ಆದರೆ ಆದೇಶವನ್ನು ಉಲ್ಲಂಘಿಸಿ ಶನಿವಾರ ಸಂಜೆಯ ವೇಳೆ ಉಜಿರೆಯ ಎಸ್‌.ಡಿ.ಎಂ ಕಾಲೇಜಿನ ಬಳಿ ಸಾರ್ವಜನಿಕ ರಸ್ತೆಗೆ ಬಂದಾಗ ಮಹೇಶ್‌ ಶೆಟ್ಟಿ ತಿಮರೋಡಿಯ ಬೆಂಬಲಿಗರಾದ ಅನಿಲ್‌ ಅಂತರ, ಮನೋಜ್ ಕುಂಜರ್ಪ, ಪ್ರಜ್ವಲ್ ಗೌಡ, ಹಾಗೂ ಇತರರು ಗುಂಪು ಸೇರಿಕೊಂಡು ಉಜಿರೆ ಎಸ್.ಡಿ.ಎಂ ಕಾಲೇಜಿನ ಎದುರು ಸಾರ್ವಜನಿಕ ರಸ್ತೆಯಲ್ಲಿ ಯಾವುದೇ ಪರವಾನಿಗೆ ಪಡೆಯದೆ ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ ಶಾಂತಿ ಭಂಗ ತರುವ ಉದ್ದೇಶದಿಂದ ಪುನೀತ್ ಕೇರೆಹಳ್ಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಸುಗಮ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Related posts

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಧರ್ಮಸ್ಥಳ-ಮುಂಡ್ರುಪಾಡಿ
ಭೀಕರ ರಸ್ತೆ ಅಪಘಾತ
ಗುರುವಾಯನಕೆರೆಯ ನಿವಾಸಿ ಗಂಭೀರ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya
error: Content is protected !!