July 23, 2026
ಅಪರಾಧ ಸುದ್ದಿ

ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ ಶಾಂತಿ ಭಂಗ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ; ಉಜಿರೆಯಲ್ಲಿ
ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ ಶಾಂತಿ ಭಂಗ ಆರೋಪ
ಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎ.19ರಂದು ಪ್ರಕರಣ ದಾಖಲಿಸಲಾಗಿದೆ.

ಉಜಿರೆ ನಿವಾಸಿಗಳಾದ ಅನಿಲ್ ಅಂತರ, ಮನೋಜ್ ಕುಂಜರ್ಪ, ಪ್ರಜ್ವಲ್ ಗೌಡ, ಪ್ರಭಾಕರ, ಗಣೇಶ್ ಹಾಗೂ ಇತರರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿ ಪೊಲೀಸ್‌ ಠಾಣೆಯ ಎಸ್. ಐ ಮುರಳೀಧರ ನಾಯ್ಕ ಕೆ.ಜಿ ಅವರ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.

ಪುನೀತ್ ಕೇರೆಹಳ್ಳಿ ಅವರು ಉಜಿರೆಗೆ ಬಂದರೆ ಉಜಿರೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ಶಾಂತಿ ಭಂಗ ಉಂಟುಮಾಡುವ ಸಾಧ್ಯತೆ ಇದ್ದ ಕಾರಣ ದ.ಕ ಜಿಲ್ಲಾಧಿಕಾರಿಯವರು ಸರ್ವಜನಿ ಹಿತದೃಷ್ಟಿಯಿಂದ ಪುನೀತ್ ಕೇರೆಹಳ್ಳಿ ಗೆ ಜಿಲ್ಲೆಯ ಸರಹದ್ದಿನೊಳಗೆ ಪ್ರವೇಶಿಸದಂತೆ ಕಲಂ163 ಬಿ.ಎನ್.ಎಸ್ 2023 ರಂತೆ ನಿರ್ಭಂಧಿಸಿ ಮಾನ್ಯ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರು. ಆದರೆ ಆದೇಶವನ್ನು ಉಲ್ಲಂಘಿಸಿ ಶನಿವಾರ ಸಂಜೆಯ ವೇಳೆ ಉಜಿರೆಯ ಎಸ್‌.ಡಿ.ಎಂ ಕಾಲೇಜಿನ ಬಳಿ ಸಾರ್ವಜನಿಕ ರಸ್ತೆಗೆ ಬಂದಾಗ ಮಹೇಶ್‌ ಶೆಟ್ಟಿ ತಿಮರೋಡಿಯ ಬೆಂಬಲಿಗರಾದ ಅನಿಲ್‌ ಅಂತರ, ಮನೋಜ್ ಕುಂಜರ್ಪ, ಪ್ರಜ್ವಲ್ ಗೌಡ, ಹಾಗೂ ಇತರರು ಗುಂಪು ಸೇರಿಕೊಂಡು ಉಜಿರೆ ಎಸ್.ಡಿ.ಎಂ ಕಾಲೇಜಿನ ಎದುರು ಸಾರ್ವಜನಿಕ ರಸ್ತೆಯಲ್ಲಿ ಯಾವುದೇ ಪರವಾನಿಗೆ ಪಡೆಯದೆ ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ ಶಾಂತಿ ಭಂಗ ತರುವ ಉದ್ದೇಶದಿಂದ ಪುನೀತ್ ಕೇರೆಹಳ್ಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಸುಗಮ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Related posts

ಉಜಿರೆ ಕಕ್ಕರೆಬೆಟ್ಟು ಮನೆ ಕೆಡವಿ, ಸೊತ್ತುಗಳನ್ನು ಹೊರಗೆ ಎಸೆದ ಪ್ರಕರಣ: ಆರೋಪಿ ವಿರುದ್ಧ ಕೇಸು ದಾಖಲು

Suddi Udaya

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಹೊಸಂಗಡಿ ತೊರ್ಪೆ ಡ್ಯಾಂ ಬಳಿ ನದಿಯಲ್ಲಿ ಕಾರ್ಕಳ ಮಿಯಾರು ನಿವಾಸಿ ಯತೀಶ್ ಪೂಜಾರಿ ಶವ ಪತ್ತೆ : ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಕುಟುಂಬಸ್ಥರಿಂದ ಪೊಲೀಸರಿಗೆ ದೂರು

Suddi Udaya

ನಿಷೇದಿತ ಮಾದಕವಸ್ತು ಮಾರಾಟ ಯತ್ನ ಪ್ರಕರಣ: ಆರೋಪಿಗೆ ಶಿಕ್ಷೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya
error: Content is protected !!