30.2 C
ಪುತ್ತೂರು, ಬೆಳ್ತಂಗಡಿ
June 7, 2025
Uncategorizedರಾಜಕೀಯ

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

ಬೆಳ್ತಂಗಡಿ: ಇಂದು ಗುರುವಾಯನಕೆರೆಯ ಶಕ್ತಿನಗರದಲ್ಲಿ ನಡೆಯಲಿರುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಎಂಬ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ನ್ನು ಕಿಡಿಗೇಡಿಗಳು ಹರಿದ ಘಟನೆ ಗುರುವಾಯನಕೆರೆಯಲ್ಲಿ ನಡೆದಿದೆ.

ಸಮಾವೇಶದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ , ಸಚಿವರಾದ ಚೆಲುವರಾಯ ಸ್ವಾಮಿ , ದಿನೇಶ್ ಗುಂಡೂರಾವ್ ಸೇರಿದಂತೆ ರಾಜ್ಯ ಮಟ್ಟದ ಹಲವಾರು ನಾಯಕರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಹತ್ತಾರು ದಿನಗಳಿಂದ ತಾಲುಕಿನಾದ್ಯಂತ ವ್ಯಾಪಕ ಪ್ರಮಾಣದ ಪ್ರಚಾರ ಬ್ಯಾನರ್ , ಪಕ್ಷದ ಧ್ವಜಗಳು ಸೇರಿದಂತೆ ಬಂಟಿಂಕ್ಸ್ ಗಳನ್ನು ಅಳವಡಿಸಲಾಗಿತ್ತು.

ಕಳೆದ ರಾತ್ರಿ ಗುರುವಾಯನಕೆರೆ ಎಂಬಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಘಟನೆಯನ್ನು ಖಂಡಿಸಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ” ಪಕ್ಷದ ಬೆಳವಣಿಗೆಯನ್ನು ಸಹಿಸದೆ ಬಿಜೆಪಿ ಕಾರ್ಯಕರ್ತರು ಹತಾಶೆಯಿಂದ ಈ ಕಾರ್ಯ ನಡೆಸಿದ್ದಾರೆ. ಇಂತಹ ಕಾರ್ಯದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಮತ್ತು ಪಕ್ಷವನ್ನು ಬೆದರಿಸಲು ಸಾಧ್ಯವಿಲ್ಲ. ನೀವು ಚಿವುಟಿದಷ್ಟು ನಾವು ಚಿಗುರುತ್ತೇವೆ ಇಂದಿನ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯುತ್ತದೆ ಎಂದಿದ್ದಾರೆ.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya
error: Content is protected !!