April 21, 2025
Uncategorizedರಾಜಕೀಯ

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

ಬೆಳ್ತಂಗಡಿ: ಇಂದು ಗುರುವಾಯನಕೆರೆಯ ಶಕ್ತಿನಗರದಲ್ಲಿ ನಡೆಯಲಿರುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಎಂಬ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ನ್ನು ಕಿಡಿಗೇಡಿಗಳು ಹರಿದ ಘಟನೆ ಗುರುವಾಯನಕೆರೆಯಲ್ಲಿ ನಡೆದಿದೆ.

ಸಮಾವೇಶದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ , ಸಚಿವರಾದ ಚೆಲುವರಾಯ ಸ್ವಾಮಿ , ದಿನೇಶ್ ಗುಂಡೂರಾವ್ ಸೇರಿದಂತೆ ರಾಜ್ಯ ಮಟ್ಟದ ಹಲವಾರು ನಾಯಕರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಹತ್ತಾರು ದಿನಗಳಿಂದ ತಾಲುಕಿನಾದ್ಯಂತ ವ್ಯಾಪಕ ಪ್ರಮಾಣದ ಪ್ರಚಾರ ಬ್ಯಾನರ್ , ಪಕ್ಷದ ಧ್ವಜಗಳು ಸೇರಿದಂತೆ ಬಂಟಿಂಕ್ಸ್ ಗಳನ್ನು ಅಳವಡಿಸಲಾಗಿತ್ತು.

ಕಳೆದ ರಾತ್ರಿ ಗುರುವಾಯನಕೆರೆ ಎಂಬಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಘಟನೆಯನ್ನು ಖಂಡಿಸಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ” ಪಕ್ಷದ ಬೆಳವಣಿಗೆಯನ್ನು ಸಹಿಸದೆ ಬಿಜೆಪಿ ಕಾರ್ಯಕರ್ತರು ಹತಾಶೆಯಿಂದ ಈ ಕಾರ್ಯ ನಡೆಸಿದ್ದಾರೆ. ಇಂತಹ ಕಾರ್ಯದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಮತ್ತು ಪಕ್ಷವನ್ನು ಬೆದರಿಸಲು ಸಾಧ್ಯವಿಲ್ಲ. ನೀವು ಚಿವುಟಿದಷ್ಟು ನಾವು ಚಿಗುರುತ್ತೇವೆ ಇಂದಿನ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯುತ್ತದೆ ಎಂದಿದ್ದಾರೆ.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾಯರ್ತಡ್ಕ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಆಚರಣೆ

Suddi Udaya
error: Content is protected !!