24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆ ಲೋಕಾರ್ಪಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಅತಿ ದೊಡ್ಡ ಆಭರಣ ಮಳಿಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಇದರ ನವೀಕೃತ ಮಳಿಗೆಯನ್ನು ಎ.20ರ ರವಿವಾರ ಖ್ಯಾತ ನಟ, ಮುಳಿಯ ಸಂಸ್ಥೆಯ ನೂತನ ರಾಯಭಾರಿ ರಮೇಶ್‌ ಅರವಿಂದ್ ಉದ್ಘಾಟಿಸಿದರು.

ರವಿವಾರ ಬೆಳಗ್ಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆನಂತರ ದೇವರ ದೀಪದೊಂದಿಗೆ ಮೆರವಣಿಗೆ ಮೂಲಕ ಕೋರ್ಟ್‌ ರಸ್ತೆಯಲ್ಲಿರುವ ಶೋರೂಂಗೆ ಆಗಮಿಸಿದರು.

ಮುಳಿಯ ಸಂಸ್ಥೆಯ ನೂತನ ರಾಯಭಾರಿ ರಮೇಶ್‌ ಅರವಿಂದ್, ಬಲೂನ್ ಹಾರಿಸಿ, ಕರ್ಟನ್ ರೈಸ್‌ ಮಾಡಿದರು. ಬಳಿಕ ದೀಪ ಬೆಳಗಿಸಿ, ವಿದ್ಯುಕ್ತವಾಗಿ ಉದ್ಘಾಟನೆ ಮಾಡಲಾಯಿತು.

1944 ರಲ್ಲಿ ಪ್ರಾರಂಭಗೊಂಡ ಮುಳಿಯ ಜ್ಯುವೆಲ್ಸ್, ಪುತ್ತೂರಿನಲ್ಲಿ 10000 ಚದರ ಅಡಿಯ ವಿಶಾಲ ಶೋರೂಂ ಅನ್ನು ತೆರೆಯಲಾಗಿದೆ. ನಾಲ್ಕು ಅಂತಸ್ತಿ ನಲ್ಲಿ ಚಿನ್ನ, ಬೆಳ್ಳಿ, ವಜ್ರ, ಆಧುನಿಕ ಬ್ರಾಂಡೆಡ್ ವಾಚುಗಳು, ಗಿಫ್ಟ್ ಐಟಂ, ಚಿನ್ನಾಭರಣಗಳ ಕೌಂಟರ್‌ಗಳನ್ನು ಹೊಂದಿರಲಿವೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಎಂಬಂತೆ ಗ್ರಾಹಕರಿಗೆ ಮಳಿಗೆಯಲ್ಲೇ ಉಚಿತ ಊಟ, ಉಪಾಹಾರಗಳನ್ನು ಆರಂಭಿಸಲಾಗಿದೆ.

ಮಧ್ಯಾಹ್ನ 12 ರಿಂದ 2.30 ರ ಒಳಗೆ ಆಭರಣ ಖರೀದಿಗೆ ಬರುವ ಗ್ರಾಹಕರಿಗೆ ಊಟ, ಸಂಜೆ 4 ರಿಂದ 6.30 ರ ಒಳಗೆ ಬರುವವರಿಗೆ ಉಪಾಹಾರ ವ್ಯವಸ್ಥೆ ಇರಲಿದೆ.ಜತೆಗೆ ಮಕ್ಕಳ ಆಟ, ಆರೈಕೆಗೆ ವಿಶೇಷ ಕೊಠಡಿ, ವ್ಯಾಲೆಟ್ ಪಾರ್ಕಿಂಗ್, ವಾಚ್ ಕೌಂಟ ರ್, ಬೆಳ್ಳಿಯ ಆಭರಣಗಳ ಸಿಲ್ವರಿಯ ಕೌಂಟ‌ರ್, ವಜ್ರಾಭರಣ ಅಮೂಲ್ಯ ಕೌಂಟ‌ರ್, ಗೋಲ್ಡ್‌ ಪ್ಯೂರಿಟಿ ಅನಲೈಸರ್ ಹಾಗೂ ಡೈಮಂಡ್ ಡಿಟೆಕ್ಟ‌ರ್ ಟೆಸ್ಟಿಂಗ್ ಮಿಷನ್ ಸೌಲಭ್ಯಗಳಿವೆ.

Related posts

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya

ಅಂಜನಾ ಕೆ ರಾವ್ ದೂರದರ್ಶನ ‘ಬಿ’ ಗ್ರೇಡ್ ಕಲಾವಿದರಾಗಿ ಆಯ್ಕೆ

Suddi Udaya

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

Suddi Udaya

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್: ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ,ಉದ್ಯಮಿ ಜಗದೀಶ್ ಪೂಜಾರಿ ಪೆರಾಜೆ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya
error: Content is protected !!