22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆ ಲೋಕಾರ್ಪಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಅತಿ ದೊಡ್ಡ ಆಭರಣ ಮಳಿಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಇದರ ನವೀಕೃತ ಮಳಿಗೆಯನ್ನು ಎ.20ರ ರವಿವಾರ ಖ್ಯಾತ ನಟ, ಮುಳಿಯ ಸಂಸ್ಥೆಯ ನೂತನ ರಾಯಭಾರಿ ರಮೇಶ್‌ ಅರವಿಂದ್ ಉದ್ಘಾಟಿಸಿದರು.

ರವಿವಾರ ಬೆಳಗ್ಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆನಂತರ ದೇವರ ದೀಪದೊಂದಿಗೆ ಮೆರವಣಿಗೆ ಮೂಲಕ ಕೋರ್ಟ್‌ ರಸ್ತೆಯಲ್ಲಿರುವ ಶೋರೂಂಗೆ ಆಗಮಿಸಿದರು.

ಮುಳಿಯ ಸಂಸ್ಥೆಯ ನೂತನ ರಾಯಭಾರಿ ರಮೇಶ್‌ ಅರವಿಂದ್, ಬಲೂನ್ ಹಾರಿಸಿ, ಕರ್ಟನ್ ರೈಸ್‌ ಮಾಡಿದರು. ಬಳಿಕ ದೀಪ ಬೆಳಗಿಸಿ, ವಿದ್ಯುಕ್ತವಾಗಿ ಉದ್ಘಾಟನೆ ಮಾಡಲಾಯಿತು.

1944 ರಲ್ಲಿ ಪ್ರಾರಂಭಗೊಂಡ ಮುಳಿಯ ಜ್ಯುವೆಲ್ಸ್, ಪುತ್ತೂರಿನಲ್ಲಿ 10000 ಚದರ ಅಡಿಯ ವಿಶಾಲ ಶೋರೂಂ ಅನ್ನು ತೆರೆಯಲಾಗಿದೆ. ನಾಲ್ಕು ಅಂತಸ್ತಿ ನಲ್ಲಿ ಚಿನ್ನ, ಬೆಳ್ಳಿ, ವಜ್ರ, ಆಧುನಿಕ ಬ್ರಾಂಡೆಡ್ ವಾಚುಗಳು, ಗಿಫ್ಟ್ ಐಟಂ, ಚಿನ್ನಾಭರಣಗಳ ಕೌಂಟರ್‌ಗಳನ್ನು ಹೊಂದಿರಲಿವೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಎಂಬಂತೆ ಗ್ರಾಹಕರಿಗೆ ಮಳಿಗೆಯಲ್ಲೇ ಉಚಿತ ಊಟ, ಉಪಾಹಾರಗಳನ್ನು ಆರಂಭಿಸಲಾಗಿದೆ.

ಮಧ್ಯಾಹ್ನ 12 ರಿಂದ 2.30 ರ ಒಳಗೆ ಆಭರಣ ಖರೀದಿಗೆ ಬರುವ ಗ್ರಾಹಕರಿಗೆ ಊಟ, ಸಂಜೆ 4 ರಿಂದ 6.30 ರ ಒಳಗೆ ಬರುವವರಿಗೆ ಉಪಾಹಾರ ವ್ಯವಸ್ಥೆ ಇರಲಿದೆ.ಜತೆಗೆ ಮಕ್ಕಳ ಆಟ, ಆರೈಕೆಗೆ ವಿಶೇಷ ಕೊಠಡಿ, ವ್ಯಾಲೆಟ್ ಪಾರ್ಕಿಂಗ್, ವಾಚ್ ಕೌಂಟ ರ್, ಬೆಳ್ಳಿಯ ಆಭರಣಗಳ ಸಿಲ್ವರಿಯ ಕೌಂಟ‌ರ್, ವಜ್ರಾಭರಣ ಅಮೂಲ್ಯ ಕೌಂಟ‌ರ್, ಗೋಲ್ಡ್‌ ಪ್ಯೂರಿಟಿ ಅನಲೈಸರ್ ಹಾಗೂ ಡೈಮಂಡ್ ಡಿಟೆಕ್ಟ‌ರ್ ಟೆಸ್ಟಿಂಗ್ ಮಿಷನ್ ಸೌಲಭ್ಯಗಳಿವೆ.

Related posts

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಅದ್ದೂರಿಯ ಸಾಮೂಹಿಕ ವಿವಾಹ- ಸುಮಾರು 500ಕ್ಕೂ ಹೆಚ್ಚು ನವಜೋಡಿಗಳಿಗೆ ಕ್ಲಬ್ ನಿಂದ ಸರಳ ವಿವಾಹ-ವಿವಿಧ ಕ್ಷೇತ್ರದ ಸಾಧಕರಿಗೆ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಜೂ. 6: ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣಾ ಸಮಿತಿ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಆಶ್ರಯದಲ್ಲಿ ಕ್ರಾಂತಿವೀರ ಉಬಾರ್ ಮಂಜ ಬೈದ್ಯ ಪುಸ್ತಕ ಬಿಡುಗಡೆ

Suddi Udaya

ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ನಿರ್ಗಮಿತ ಟ್ರಸ್ಟಿಗಳಿಗೆ ಬೀಳ್ಕೊಡುಗೆ

Suddi Udaya

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ: ತೀರ್ಥೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು

Suddi Udaya
error: Content is protected !!