23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿ

ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ, ಬಂಟರ ಯುವ ವಿಭಾಗ ಮತ್ತು ಬಂಟರ ಮಹಿಳಾ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಪಣೆಜಾಲ್ ಇಂಡೋರ್ ಲಯನ್ಸ್ ಕ್ರೀಡಾಂಗಣದಲ್ಲಿ ಬಂಟರ ಇಂಡೋರ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

ಬೆಳ್ತಂಗಡಿ :ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ, ಬಂಟರ ಯುವ ವಿಭಾಗ ಮತ್ತು ಬಂಟರ ಮಹಿಳಾ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಪಣೆಜಾಲ್ ಇಂಡೋರ್ ಲಯನ್ಸ್ ಕ್ರೀಡಾಂಗಣದಲ್ಲಿ ಬಂಟರ ಇಂಡೋರ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಿತು.

ಇದರ ಉದ್ಘಾಟನೆಯನ್ನು ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ. ಅಧ್ಯಕ್ಷರು, ಲಯನ್ಸ್ ಕ್ಲಬ್ ಬೆಳ್ತಂಗಡಿ, ಅಧ್ಯಕ್ಷತೆಯನ್ನು ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಬಿ. ಜಯಂತ ಶೆಟ್ಟಿ ಭಂಡಾರಿಗುಡ್ಡೆಯವರು ವಹಿಸಿಕೊಂಡರು. ಮುಖ್ಯ ಅತಿಥಿಗಳಾಗಿ ಶ್ರೀ ಶೇಖರ್ ಶೆಟ್ಟಿ ಮನಸ್ವಿ ಪಣೆಜಾಲು ಉದ್ಯಮಿಗಳು ಶ್ರೀ ಜಯಂತ ಶೆಟ್ಟಿ ಕುಂಟಿನಿ ಉಪಾಧ್ಯಕ್ಷರು, ವಿಜಯ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ಗುರುವಾಯನಕೆರೆ, ಶ್ರೀ ಪುಷ್ಪರಾಜ್ ಶೆಟ್ಟಿ ಬೆಳ್ತಂಗಡಿ, ಸಂಚಾಲಕರು ಯುವ ಬಂಟ ವಿಭಾಗ ಇವರು ಭಾಗವಹಿದ್ದರು. ವೇದಿಕೆಯಲ್ಲಿ ಶ್ರೀ ವಸಂತ ಶೆಟ್ಟಿ ಶ್ರದ್ದಾ ಕೋಶಾಧಿಕಾರಿ ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ಶ್ರೀ ಜಯರಾಮ ಭಂಡಾರಿ ಧರ್ಮಸ್ಥಳ, ಸಂಚಾಲಕರು ಬಂಟರ ಯಾನೆ ನಾಡವರ ಮಾತೃ ಸಂಘ (ರಿ ) ಮಂಗಳೂರು, ಶ್ರೀ ರಘುರಾಮ ಶೆಟ್ಟಿ ಸಾಧನ, ಮಾಜಿ ಅಧ್ಯಕ್ಷರು ಬಂಟರ ಸಂಘ ಬೆಳ್ತಂಗಡಿ, ಶ್ರೀಮತಿ ವನಿತಾ ವಿ. ಶೆಟ್ಟಿ ಅಧ್ಯಕ್ಷರು, ಉಜಿರೆ ವಲಯ, ಶ್ರೀ ಆನಂದ ಶೆಟ್ಟಿ ಐಸಿರಿ, ನಿರ್ದೇಶಕರು ಬಂಟರ ಸಂಘ ಬೆಳ್ತಂಗಡಿ ,ವೆಂಕಟ್ರಮಣ ಶೆಟ್ಟಿ ಉಜಿರೆ ಕ್ರೀಡಾ ಸಂಚಾಲಕರು ಬಂಟರ ಸಂಘ ಬೆಳ್ತಂಗಡಿ ಉಪಸ್ಥಿತರಿದ್ದರು. ಶ್ರೀ ರಾಜು ಶೆಟ್ಟಿ ಬೆಂಗತ್ಯಾರ್ ಸ್ವಾಗತಿಸಿದರು. ಶ್ರೀ ಸುರೇಶ್ ಶೆಟ್ಟಿ ಲಾಯಿಲ ಧನ್ಯವಾದವಿತ್ತರು. ಶ್ರೀ ಕಿರಣ್ eಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ಈ ಪಂದ್ಯಾಟದಲ್ಲಿ ತಾಲೂಕಿನ ಬಂಟ ಸಮಾಜದ 40 ತಂಡಗಳು ಭಾಗವಹಿಸಿದ್ದವು.

Related posts

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

Suddi Udaya

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya

ಬಂದಾರು : ದ.ಕ.ಜಿಲ್ಲಾ ಮಾಗಣೆ ಮಟ್ಟದ ಕುಂಬಾರರ ಬೃಹತ್ ಸಮಾವೇಶ – ಕುಂಭಾ ಸಮಾಗಮ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ

Suddi Udaya

ಎಸ್.ಎಮ್.ಎಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ನಾಳ: ದ್ವಿತೀಯ ವರ್ಷದ ಶ್ರೀ ದುರ್ಗಾ ಕಪ್ ಹಿರಿಯರ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!