25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮೇಲಂತಬೆಟ್ಟು ಮೀಸಲು ಅರಣ್ಯದಿಂದ ಅಕ್ರಮವಾಗಿ ಪ್ರವೇಶಿಸಿ ಬೆಲೆಬಾಳುವ ಮರಕಡಿದ ಪ್ರಕರಣ : ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮರ, ಹಿಟಾಚಿ, ಕಟ್ಟಿಂಗ್ ಮೆಷಿನ್ ಸಹಿತ ಸೋತ್ತುಗಳ ವಶ

ಬೆಳ್ತಂಗಡಿ : ಮೇಲಂತಬೆಟ್ಟು ಮೀಸಲು ಅರಣ್ಯ ಪ್ರದೇಶದೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ಹಿಟಾಚಿ ಬಳಸಿ ಬೆಳೆಬಾಳುವ ಮರಗಳನ್ನು ಕಡಿದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಬೆಳ್ತಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಮರ ಕಡಿಯಲು ಬಳಸಿದ
ಸೊತ್ತು ಸಹಿತಮರವನ್ನು ವಶಪಡಿಸಿಕೊಂಡ ಪ್ರಕರಣ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಮೀಸಲು ಅರಣ್ಯ ಪ್ರದೇಶದೊಳಗೆ ಹಿಟಾಚಿ ಬಳಸಿ ರಸ್ತೆ ನಿರ್ಮಾಣ ಮಾಡಿ ಬೆಳೆಬಾಳುವ ಮರಗಳನ್ನು ಕಡಿದ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್.ಎಫ್.ಒ ತ್ಯಾಗರಾಜ್.ಟಿ.ಎಮ್ ನೇತೃತ್ವದ ತಂಡ ಏ.16 ರಂದು ಸಂಜೆ ದಾಳಿ ನಡೆಸಿ ಸೊತ್ತುಗಳನ್ನು ವಶಪಡಿಸಿಕೊಂಡು ಬೆಳ್ತಂಗಡಿ ನ್ಯಾಯಾಲಯ ಅನುಮತಿ ಪಡೆದು ಏ.19 ರಂದು ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದಾಳಿ ವೇಳೆ ಸಾಗಾಟ ಮಾಡಲು ಕಡಿದು ದಾಸ್ತಾನು ಮಾಡಿದ್ದ ಸುಮಾರು 3 ಲಕ್ಷ ಮೌಲ್ಯದ ವಿವಿಧ ಜಾತಿಯ 14.500 ಮೀಟರ್ ಮರಗಳು, 30 ಲಕ್ಷ ಮೌಲ್ಯದ ಒಂದು ಸಾನಿ ಕಂಪನಿಯ ಹಿಟಾಚಿ ಮೇಷಿನ್, 60 ಸಾವಿರ ಮೌಲ್ಯದ ಒಂದು ಮರ ಕಟ್ಟಿಂಗ್ ಮಾಡುವ ಮೆಷಿನ್,15 ಸಾವಿರ ಮೌಲ್ಯದ ಒಂದು ಕಬ್ಬಿಣದ ಸಂಕೋಲೆ ಸೇರಿ ಒಟ್ಟು 33,75,000 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಕ್ಕೆ ಸಂಬಂಧಿಸಿದಂತೆ ನಾರಾವಿ ಗ್ರಾಮದ ಡೊಂಕಬೆಟ್ಟು ನಿವಾಸಿ ಪ್ರಕಾಶ್ ಪೂಜಾರಿ ಮತ್ತು ಹಿಟಾಚಿ ಮಾಲಕ & ಅಪರೇಟರ್ ಕಾರ್ಕಳ ತ ನೂರಲ್ಬೆಟ್ಟು ಗ್ರಾಮದ ನಿವಾಸಿ ಕರುಣಾಕರ ಭಂಡಾರಿ ವಿರುದ್ಧ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಒ ತ್ಯಾಗರಾಜ್.ಟಿ.ಎನ್, ಡಿ.ಆರ್‌ಎಫ್.ಒ ಕೆ.ರವೀಂದ್ರ ನಾಯ್ಕ್, ಡಿ.ಆರ್.ಎಫ್.ಒ ಸಂದೀಪ್(ವಿಶೇಷ ಪತ್ತೆ ದಳ), ಅರಣ್ಯ ಪಾಲಕ ಪರಶುರಾಮ, ಗಸ್ತು ಅರಣ್ಯ ಪಾಲಕ ಪ್ರತಾಪ್, ವಾಹನ ಚಾಲಕ ಕುಶಲಪ್ಪ ಗೌಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ

Suddi Udaya

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ

Suddi Udaya

ಗುರುವಾಯನಕೆರೆ ಹರಿಯಪ್ಪ ಮೂಲ್ಯರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಬಡಿದ ಸಿಡಿಲು

Suddi Udaya

ಚಾರ್ಮಾಡಿ ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗದ ವತಿಯಿಂದ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆ

Suddi Udaya
error: Content is protected !!