25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ ಶಾಂತಿ ಭಂಗ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ; ಉಜಿರೆಯಲ್ಲಿ
ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ ಶಾಂತಿ ಭಂಗ ಆರೋಪ
ಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎ.19ರಂದು ಪ್ರಕರಣ ದಾಖಲಿಸಲಾಗಿದೆ.

ಉಜಿರೆ ನಿವಾಸಿಗಳಾದ ಅನಿಲ್ ಅಂತರ, ಮನೋಜ್ ಕುಂಜರ್ಪ, ಪ್ರಜ್ವಲ್ ಗೌಡ, ಪ್ರಭಾಕರ, ಗಣೇಶ್ ಹಾಗೂ ಇತರರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿ ಪೊಲೀಸ್‌ ಠಾಣೆಯ ಎಸ್. ಐ ಮುರಳೀಧರ ನಾಯ್ಕ ಕೆ.ಜಿ ಅವರ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.

ಪುನೀತ್ ಕೇರೆಹಳ್ಳಿ ಅವರು ಉಜಿರೆಗೆ ಬಂದರೆ ಉಜಿರೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ಶಾಂತಿ ಭಂಗ ಉಂಟುಮಾಡುವ ಸಾಧ್ಯತೆ ಇದ್ದ ಕಾರಣ ದ.ಕ ಜಿಲ್ಲಾಧಿಕಾರಿಯವರು ಸರ್ವಜನಿ ಹಿತದೃಷ್ಟಿಯಿಂದ ಪುನೀತ್ ಕೇರೆಹಳ್ಳಿ ಗೆ ಜಿಲ್ಲೆಯ ಸರಹದ್ದಿನೊಳಗೆ ಪ್ರವೇಶಿಸದಂತೆ ಕಲಂ163 ಬಿ.ಎನ್.ಎಸ್ 2023 ರಂತೆ ನಿರ್ಭಂಧಿಸಿ ಮಾನ್ಯ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರು. ಆದರೆ ಆದೇಶವನ್ನು ಉಲ್ಲಂಘಿಸಿ ಶನಿವಾರ ಸಂಜೆಯ ವೇಳೆ ಉಜಿರೆಯ ಎಸ್‌.ಡಿ.ಎಂ ಕಾಲೇಜಿನ ಬಳಿ ಸಾರ್ವಜನಿಕ ರಸ್ತೆಗೆ ಬಂದಾಗ ಮಹೇಶ್‌ ಶೆಟ್ಟಿ ತಿಮರೋಡಿಯ ಬೆಂಬಲಿಗರಾದ ಅನಿಲ್‌ ಅಂತರ, ಮನೋಜ್ ಕುಂಜರ್ಪ, ಪ್ರಜ್ವಲ್ ಗೌಡ, ಹಾಗೂ ಇತರರು ಗುಂಪು ಸೇರಿಕೊಂಡು ಉಜಿರೆ ಎಸ್.ಡಿ.ಎಂ ಕಾಲೇಜಿನ ಎದುರು ಸಾರ್ವಜನಿಕ ರಸ್ತೆಯಲ್ಲಿ ಯಾವುದೇ ಪರವಾನಿಗೆ ಪಡೆಯದೆ ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ ಶಾಂತಿ ಭಂಗ ತರುವ ಉದ್ದೇಶದಿಂದ ಪುನೀತ್ ಕೇರೆಹಳ್ಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಸುಗಮ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Related posts

ಮುಂಡಾಜೆ ಸೀಟು ಬಳಿ ಬೊಲೇರೋ ಬೈಕ್ ಗೆ ಡಿಕ್ಕಿ : ಶಾಲಾ ಬಾಲಕಿ ಆಸ್ಪತ್ರೆಯಲ್ಲಿ ಮೃತ್ಯು

Suddi Udaya

ಕೊಕ್ಕಡ ಪ್ರೌಢ ಶಾಲೆಯಿಂದ ರೂ. 3.20 ಲಕ್ಷ ಮೌಲ್ಯದ ಬ್ಯಾಟರಿ ಕಳವು ಮಾಡಿದ ಮೂವರ ಬಂಧನ

Suddi Udaya

ಸ್ಕೂಟರ್-ಟಿಪ್ಪರ್ ನಡುವೆ ಅಪಘಾತ: ಕೂಟದಕಲ್ಲು ನಿವಾಸಿ ಸುಧಾಕರ್ ರವರಿಗೆ ಗಾಯ

Suddi Udaya

ಕಲ್ಮಂಜ ನಿಡಿಗಲ್‌ನಲ್ಲಿ ಭೀಕರ ವಾಹನ ಅಪಘಾತ ಬೈಕ್‌ ಮತ್ತು ಸ್ಕಾಪಿ೯ಯೋ ನಡುವೆ ಅಪಘಾತ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!