April 21, 2025
Uncategorizedರಾಜಕೀಯ

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

ಬೆಳ್ತಂಗಡಿ: ಇಂದು ಗುರುವಾಯನಕೆರೆಯ ಶಕ್ತಿನಗರದಲ್ಲಿ ನಡೆಯಲಿರುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಎಂಬ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ನ್ನು ಕಿಡಿಗೇಡಿಗಳು ಹರಿದ ಘಟನೆ ಗುರುವಾಯನಕೆರೆಯಲ್ಲಿ ನಡೆದಿದೆ.

ಸಮಾವೇಶದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ , ಸಚಿವರಾದ ಚೆಲುವರಾಯ ಸ್ವಾಮಿ , ದಿನೇಶ್ ಗುಂಡೂರಾವ್ ಸೇರಿದಂತೆ ರಾಜ್ಯ ಮಟ್ಟದ ಹಲವಾರು ನಾಯಕರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಹತ್ತಾರು ದಿನಗಳಿಂದ ತಾಲುಕಿನಾದ್ಯಂತ ವ್ಯಾಪಕ ಪ್ರಮಾಣದ ಪ್ರಚಾರ ಬ್ಯಾನರ್ , ಪಕ್ಷದ ಧ್ವಜಗಳು ಸೇರಿದಂತೆ ಬಂಟಿಂಕ್ಸ್ ಗಳನ್ನು ಅಳವಡಿಸಲಾಗಿತ್ತು.

ಕಳೆದ ರಾತ್ರಿ ಗುರುವಾಯನಕೆರೆ ಎಂಬಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಘಟನೆಯನ್ನು ಖಂಡಿಸಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ” ಪಕ್ಷದ ಬೆಳವಣಿಗೆಯನ್ನು ಸಹಿಸದೆ ಬಿಜೆಪಿ ಕಾರ್ಯಕರ್ತರು ಹತಾಶೆಯಿಂದ ಈ ಕಾರ್ಯ ನಡೆಸಿದ್ದಾರೆ. ಇಂತಹ ಕಾರ್ಯದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಮತ್ತು ಪಕ್ಷವನ್ನು ಬೆದರಿಸಲು ಸಾಧ್ಯವಿಲ್ಲ. ನೀವು ಚಿವುಟಿದಷ್ಟು ನಾವು ಚಿಗುರುತ್ತೇವೆ ಇಂದಿನ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯುತ್ತದೆ ಎಂದಿದ್ದಾರೆ.

Related posts

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ಬೆಳ್ತಂಗಡಿ : ತಡೆಗೋಡೆ ರಚನೆ ಕಾಮಗಾರಿಗೆ ರೂ.2 ಕೋಟಿ 10 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

Suddi Udaya

ಮದ್ದಡ್ಕ ಪರಿಸರದಲ್ಲಿ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ಕಿಡಿಗೇಡಿಗಳಿಂದ ತ್ಯಾಜ್ಯ ಕಸ ಎಸೆತ

Suddi Udaya

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗದ ವತಿಯಿಂದ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆ

Suddi Udaya
error: Content is protected !!