25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಗುರುವಾಯನಕೆರೆ: ಸರ್ಕಾರದ ನಡೆ ಕಾರ್ಯಕರ್ತರ ನಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

ಬೆಳ್ತಂಗಡಿ: ಸರ್ಕಾರದ ನಡೆ ಕಾರ್ಯಕರ್ತರ ಕಡೆ, ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಎ.20 ರಂದು ಗುರುವಾಯನಕೆರೆ ಶಕ್ತಿನಗರದಲ್ಲಿ ನಡೆಯಿತು.

ಉಪ ಮುಖ್ಯಮಂತ್ರಿ,ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ರಾಜ್ಯದ ಕಾಂಗ್ರೇಸ್ ಸರಕಾರ ಘೋಷಣೆ ಮಾಡಿದಂತೆ ಎಲ್ಲಾ ಘೋಷಣೆಗಳನ್ನು ಜನರಿಗೆ ತಲುಪಿಸುವ ಮೂಲಕ ನುಡಿದಂತೆ ನಡೆದಿದ್ದೇವೆ.ಎಲ್ಲ ಧರ್ಮದವರನ್ನು ಸೇರಿಸಿ ಕೆಲಸ ಮಾಡಬೇಕಿದೆ.ಕಾಂಗ್ರೇಸ್ ಶಕ್ತಿ ಈ ದೇಶದ ಶಕ್ತಿ‌ ಎಂದರು.

ಡಿಜಟಲ್ ಯೂತ್ ಅವರಿಗೆ ಧ್ಜಜ ನೀಡಿ ಸ್ವಾಗತಿಸಲಾಯಿತು.

ವೇದಿಕೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್,ಕಾಂಗ್ರೇಸ್ ಜಿಲ್ಲಾ ಅಧ್ಯಕ್ಷ ಕೆ.ಹರೀಶ್ ಕುಮಾರ್,ಕಾಂಗ್ರೇಸ್ ಪ್ರಮುಖರಾದ ನಿಕೇತ್ ರಾಜ್, ಮಮತಾ ಗಟ್ಟಿ,ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ,ಮಾಜಿ ಸಚಿವರಾದ ರಮಾನಾಥ ರೈ,ಅಭಯಚ್ಚಂದ್ರ ಜೈನ್,ವಿ.ಪ.ಸದಸ್ಯ ಮಂಜುನಾಥ್ ಭಂಡಾರಿ, ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ,ಉಮರ್ ಮುಸ್ಲಿಯಾರ್ ,ಪದ್ಮರಾಜ್ ಆರ್ ಮಂಗಳೂರು,
ಸುಧೀರ್ ಕುಮಾರ್ ಮರೋಳಿ,ಉಭಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ,ಲಾವಣ್ಯ ಬಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಪ್ರಾಸ್ತಾವಿಕ ಮಾತುಗಳನ್ನಾಡಿ ನಾನು ಚುನಾವಣೆಗೆ ನಿಂತಾಗ ಕಾರ್ಯಕರ್ತರು ಹಗಲಿರುಲು ದುಡಿದ್ದಿದ್ದಾರೆ.ಮಂಬರುವ ತಾ.ಪಂ.ಜಿ.ಪಂ ಚುನಾವಣೆಗೆ ಒಟ್ಟಾಗಿ ದುಡಿಯಬೇಕು. ಪಂಚ ಗ್ಯಾರಂಟಿ ಯೋಜನೆಯಿಂದ ಎಲ್ಲರಿಗೂ ಪ್ರಯೋಜನವಾಗಿದೆ. ತುಳು ಭಾಷೆಗೆ ಮಾನ್ಯತೆ,ಪ್ರವಾಸೋದ್ಯಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವಂತಾಗಬೇಕು ಎಂದರು.

Related posts

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಶಾಲೆಗೆ ಶೇ. 95.28

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಶಾಲಾಭಿವೃದ್ಧಿ-ಮೇಲುಸ್ತುವಾರಿ ಸಮಿತಿಯ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

Suddi Udaya

ಟೀಂ ಅಭಯಹಸ್ತ ವತಿಯಿಂದ ಸುಲ್ಕೇರಿಮೊಗ್ರು ಸರ್ಕಾರಿ ಶಾಲೆಗೆ ಆರ್ಥಿಕ ಸಹಕಾರದ ಹಸ್ತಾಂತರ-ಬಹುಮಾನ ವಿತರಣೆ

Suddi Udaya

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

Suddi Udaya
error: Content is protected !!