September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆ ಲೋಕಾರ್ಪಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಅತಿ ದೊಡ್ಡ ಆಭರಣ ಮಳಿಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಇದರ ನವೀಕೃತ ಮಳಿಗೆಯನ್ನು ಎ.20ರ ರವಿವಾರ ಖ್ಯಾತ ನಟ, ಮುಳಿಯ ಸಂಸ್ಥೆಯ ನೂತನ ರಾಯಭಾರಿ ರಮೇಶ್‌ ಅರವಿಂದ್ ಉದ್ಘಾಟಿಸಿದರು.

ರವಿವಾರ ಬೆಳಗ್ಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆನಂತರ ದೇವರ ದೀಪದೊಂದಿಗೆ ಮೆರವಣಿಗೆ ಮೂಲಕ ಕೋರ್ಟ್‌ ರಸ್ತೆಯಲ್ಲಿರುವ ಶೋರೂಂಗೆ ಆಗಮಿಸಿದರು.

ಮುಳಿಯ ಸಂಸ್ಥೆಯ ನೂತನ ರಾಯಭಾರಿ ರಮೇಶ್‌ ಅರವಿಂದ್, ಬಲೂನ್ ಹಾರಿಸಿ, ಕರ್ಟನ್ ರೈಸ್‌ ಮಾಡಿದರು. ಬಳಿಕ ದೀಪ ಬೆಳಗಿಸಿ, ವಿದ್ಯುಕ್ತವಾಗಿ ಉದ್ಘಾಟನೆ ಮಾಡಲಾಯಿತು.

1944 ರಲ್ಲಿ ಪ್ರಾರಂಭಗೊಂಡ ಮುಳಿಯ ಜ್ಯುವೆಲ್ಸ್, ಪುತ್ತೂರಿನಲ್ಲಿ 10000 ಚದರ ಅಡಿಯ ವಿಶಾಲ ಶೋರೂಂ ಅನ್ನು ತೆರೆಯಲಾಗಿದೆ. ನಾಲ್ಕು ಅಂತಸ್ತಿ ನಲ್ಲಿ ಚಿನ್ನ, ಬೆಳ್ಳಿ, ವಜ್ರ, ಆಧುನಿಕ ಬ್ರಾಂಡೆಡ್ ವಾಚುಗಳು, ಗಿಫ್ಟ್ ಐಟಂ, ಚಿನ್ನಾಭರಣಗಳ ಕೌಂಟರ್‌ಗಳನ್ನು ಹೊಂದಿರಲಿವೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಎಂಬಂತೆ ಗ್ರಾಹಕರಿಗೆ ಮಳಿಗೆಯಲ್ಲೇ ಉಚಿತ ಊಟ, ಉಪಾಹಾರಗಳನ್ನು ಆರಂಭಿಸಲಾಗಿದೆ.

ಮಧ್ಯಾಹ್ನ 12 ರಿಂದ 2.30 ರ ಒಳಗೆ ಆಭರಣ ಖರೀದಿಗೆ ಬರುವ ಗ್ರಾಹಕರಿಗೆ ಊಟ, ಸಂಜೆ 4 ರಿಂದ 6.30 ರ ಒಳಗೆ ಬರುವವರಿಗೆ ಉಪಾಹಾರ ವ್ಯವಸ್ಥೆ ಇರಲಿದೆ.ಜತೆಗೆ ಮಕ್ಕಳ ಆಟ, ಆರೈಕೆಗೆ ವಿಶೇಷ ಕೊಠಡಿ, ವ್ಯಾಲೆಟ್ ಪಾರ್ಕಿಂಗ್, ವಾಚ್ ಕೌಂಟ ರ್, ಬೆಳ್ಳಿಯ ಆಭರಣಗಳ ಸಿಲ್ವರಿಯ ಕೌಂಟ‌ರ್, ವಜ್ರಾಭರಣ ಅಮೂಲ್ಯ ಕೌಂಟ‌ರ್, ಗೋಲ್ಡ್‌ ಪ್ಯೂರಿಟಿ ಅನಲೈಸರ್ ಹಾಗೂ ಡೈಮಂಡ್ ಡಿಟೆಕ್ಟ‌ರ್ ಟೆಸ್ಟಿಂಗ್ ಮಿಷನ್ ಸೌಲಭ್ಯಗಳಿವೆ.

Related posts

ಧರ್ಮಸ್ಥಳ: ನಾರ್ಯ ನಿವಾಸಿ ನಾಟಿ ವೈದ್ಯ ಹೊನ್ನಪ್ಪ ಗೌಡ ನಿಧನ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ಬೆಂಗಳೂರಿನ ಕನ್ಸೇರೋ ಕಂಪೆನಿಯ ಉದ್ಯೋಗಿಗಳಿಂದ ಪರಶುರಾಮ ವನದಲ್ಲಿ ವನಮಹೋತ್ಸವ

Suddi Udaya

ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಧರ್ಮಸ್ಥಳದ ನೇತ್ರಾವತಿ ನದಿ ಸ್ಥಾನಘಟ್ಟದಲ್ಲಿ ಚಾಲನೆ

Suddi Udaya

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿಯ ಕಾನೂನು ಸಲಹೆಗಾರರಾಗಿ ಸುಬ್ರಹ್ಮಣ್ಯ ಕುಮಾರ್ ಅಗರ್ತ ನೇಮಕ

Suddi Udaya
error: Content is protected !!