July 23, 2026
ಕ್ರೀಡಾ ಸುದ್ದಿ

ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ, ಬಂಟರ ಯುವ ವಿಭಾಗ ಮತ್ತು ಬಂಟರ ಮಹಿಳಾ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಪಣೆಜಾಲ್ ಇಂಡೋರ್ ಲಯನ್ಸ್ ಕ್ರೀಡಾಂಗಣದಲ್ಲಿ ಬಂಟರ ಇಂಡೋರ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

ಬೆಳ್ತಂಗಡಿ :ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ, ಬಂಟರ ಯುವ ವಿಭಾಗ ಮತ್ತು ಬಂಟರ ಮಹಿಳಾ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಪಣೆಜಾಲ್ ಇಂಡೋರ್ ಲಯನ್ಸ್ ಕ್ರೀಡಾಂಗಣದಲ್ಲಿ ಬಂಟರ ಇಂಡೋರ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಿತು.

ಇದರ ಉದ್ಘಾಟನೆಯನ್ನು ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ. ಅಧ್ಯಕ್ಷರು, ಲಯನ್ಸ್ ಕ್ಲಬ್ ಬೆಳ್ತಂಗಡಿ, ಅಧ್ಯಕ್ಷತೆಯನ್ನು ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಬಿ. ಜಯಂತ ಶೆಟ್ಟಿ ಭಂಡಾರಿಗುಡ್ಡೆಯವರು ವಹಿಸಿಕೊಂಡರು. ಮುಖ್ಯ ಅತಿಥಿಗಳಾಗಿ ಶ್ರೀ ಶೇಖರ್ ಶೆಟ್ಟಿ ಮನಸ್ವಿ ಪಣೆಜಾಲು ಉದ್ಯಮಿಗಳು ಶ್ರೀ ಜಯಂತ ಶೆಟ್ಟಿ ಕುಂಟಿನಿ ಉಪಾಧ್ಯಕ್ಷರು, ವಿಜಯ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ಗುರುವಾಯನಕೆರೆ, ಶ್ರೀ ಪುಷ್ಪರಾಜ್ ಶೆಟ್ಟಿ ಬೆಳ್ತಂಗಡಿ, ಸಂಚಾಲಕರು ಯುವ ಬಂಟ ವಿಭಾಗ ಇವರು ಭಾಗವಹಿದ್ದರು. ವೇದಿಕೆಯಲ್ಲಿ ಶ್ರೀ ವಸಂತ ಶೆಟ್ಟಿ ಶ್ರದ್ದಾ ಕೋಶಾಧಿಕಾರಿ ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ಶ್ರೀ ಜಯರಾಮ ಭಂಡಾರಿ ಧರ್ಮಸ್ಥಳ, ಸಂಚಾಲಕರು ಬಂಟರ ಯಾನೆ ನಾಡವರ ಮಾತೃ ಸಂಘ (ರಿ ) ಮಂಗಳೂರು, ಶ್ರೀ ರಘುರಾಮ ಶೆಟ್ಟಿ ಸಾಧನ, ಮಾಜಿ ಅಧ್ಯಕ್ಷರು ಬಂಟರ ಸಂಘ ಬೆಳ್ತಂಗಡಿ, ಶ್ರೀಮತಿ ವನಿತಾ ವಿ. ಶೆಟ್ಟಿ ಅಧ್ಯಕ್ಷರು, ಉಜಿರೆ ವಲಯ, ಶ್ರೀ ಆನಂದ ಶೆಟ್ಟಿ ಐಸಿರಿ, ನಿರ್ದೇಶಕರು ಬಂಟರ ಸಂಘ ಬೆಳ್ತಂಗಡಿ ,ವೆಂಕಟ್ರಮಣ ಶೆಟ್ಟಿ ಉಜಿರೆ ಕ್ರೀಡಾ ಸಂಚಾಲಕರು ಬಂಟರ ಸಂಘ ಬೆಳ್ತಂಗಡಿ ಉಪಸ್ಥಿತರಿದ್ದರು. ಶ್ರೀ ರಾಜು ಶೆಟ್ಟಿ ಬೆಂಗತ್ಯಾರ್ ಸ್ವಾಗತಿಸಿದರು. ಶ್ರೀ ಸುರೇಶ್ ಶೆಟ್ಟಿ ಲಾಯಿಲ ಧನ್ಯವಾದವಿತ್ತರು. ಶ್ರೀ ಕಿರಣ್ eಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ಈ ಪಂದ್ಯಾಟದಲ್ಲಿ ತಾಲೂಕಿನ ಬಂಟ ಸಮಾಜದ 40 ತಂಡಗಳು ಭಾಗವಹಿಸಿದ್ದವು.

Related posts

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya

ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಬಡ್ಡಿ ಪಂದ್ಯಾಟ: ಬೆಳಾಲು ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ವಲಯ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ: ಬಳಂಜ ಪ್ರೌಢ ಶಾಲೆ ಪ್ರಥಮ

Suddi Udaya

ಮಾ.15: ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!