24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮೇಲಂತಬೆಟ್ಟು ಮೀಸಲು ಅರಣ್ಯದಿಂದ ಅಕ್ರಮವಾಗಿ ಪ್ರವೇಶಿಸಿ ಬೆಲೆಬಾಳುವ ಮರಕಡಿದ ಪ್ರಕರಣ : ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮರ, ಹಿಟಾಚಿ, ಕಟ್ಟಿಂಗ್ ಮೆಷಿನ್ ಸಹಿತ ಸೋತ್ತುಗಳ ವಶ

ಬೆಳ್ತಂಗಡಿ : ಮೇಲಂತಬೆಟ್ಟು ಮೀಸಲು ಅರಣ್ಯ ಪ್ರದೇಶದೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ಹಿಟಾಚಿ ಬಳಸಿ ಬೆಳೆಬಾಳುವ ಮರಗಳನ್ನು ಕಡಿದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಬೆಳ್ತಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಮರ ಕಡಿಯಲು ಬಳಸಿದ
ಸೊತ್ತು ಸಹಿತಮರವನ್ನು ವಶಪಡಿಸಿಕೊಂಡ ಪ್ರಕರಣ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಮೀಸಲು ಅರಣ್ಯ ಪ್ರದೇಶದೊಳಗೆ ಹಿಟಾಚಿ ಬಳಸಿ ರಸ್ತೆ ನಿರ್ಮಾಣ ಮಾಡಿ ಬೆಳೆಬಾಳುವ ಮರಗಳನ್ನು ಕಡಿದ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್.ಎಫ್.ಒ ತ್ಯಾಗರಾಜ್.ಟಿ.ಎಮ್ ನೇತೃತ್ವದ ತಂಡ ಏ.16 ರಂದು ಸಂಜೆ ದಾಳಿ ನಡೆಸಿ ಸೊತ್ತುಗಳನ್ನು ವಶಪಡಿಸಿಕೊಂಡು ಬೆಳ್ತಂಗಡಿ ನ್ಯಾಯಾಲಯ ಅನುಮತಿ ಪಡೆದು ಏ.19 ರಂದು ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದಾಳಿ ವೇಳೆ ಸಾಗಾಟ ಮಾಡಲು ಕಡಿದು ದಾಸ್ತಾನು ಮಾಡಿದ್ದ ಸುಮಾರು 3 ಲಕ್ಷ ಮೌಲ್ಯದ ವಿವಿಧ ಜಾತಿಯ 14.500 ಮೀಟರ್ ಮರಗಳು, 30 ಲಕ್ಷ ಮೌಲ್ಯದ ಒಂದು ಸಾನಿ ಕಂಪನಿಯ ಹಿಟಾಚಿ ಮೇಷಿನ್, 60 ಸಾವಿರ ಮೌಲ್ಯದ ಒಂದು ಮರ ಕಟ್ಟಿಂಗ್ ಮಾಡುವ ಮೆಷಿನ್,15 ಸಾವಿರ ಮೌಲ್ಯದ ಒಂದು ಕಬ್ಬಿಣದ ಸಂಕೋಲೆ ಸೇರಿ ಒಟ್ಟು 33,75,000 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಕ್ಕೆ ಸಂಬಂಧಿಸಿದಂತೆ ನಾರಾವಿ ಗ್ರಾಮದ ಡೊಂಕಬೆಟ್ಟು ನಿವಾಸಿ ಪ್ರಕಾಶ್ ಪೂಜಾರಿ ಮತ್ತು ಹಿಟಾಚಿ ಮಾಲಕ & ಅಪರೇಟರ್ ಕಾರ್ಕಳ ತ ನೂರಲ್ಬೆಟ್ಟು ಗ್ರಾಮದ ನಿವಾಸಿ ಕರುಣಾಕರ ಭಂಡಾರಿ ವಿರುದ್ಧ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಒ ತ್ಯಾಗರಾಜ್.ಟಿ.ಎನ್, ಡಿ.ಆರ್‌ಎಫ್.ಒ ಕೆ.ರವೀಂದ್ರ ನಾಯ್ಕ್, ಡಿ.ಆರ್.ಎಫ್.ಒ ಸಂದೀಪ್(ವಿಶೇಷ ಪತ್ತೆ ದಳ), ಅರಣ್ಯ ಪಾಲಕ ಪರಶುರಾಮ, ಗಸ್ತು ಅರಣ್ಯ ಪಾಲಕ ಪ್ರತಾಪ್, ವಾಹನ ಚಾಲಕ ಕುಶಲಪ್ಪ ಗೌಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya

ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ

Suddi Udaya

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಟೋಟ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ: ಸ್ಥಳ ಪರಿಶೀಲನೆ

Suddi Udaya
error: Content is protected !!