April 21, 2025
ತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾದಕಲ್ಯಾಣ ಮಂಟಪಗಳ ಸಮುಚ್ಚಗಳ ಉದ್ಘಾಟನೆ

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ನೂತನವಾಗಿ ನಿರ್ಮಿಸಲಾದ ಕಲ್ಯಾಣ ಮಂಟಪಗಳಾದ ಶ್ರೀ ಉಮಾಮಹೇಶ್ವರ, ಶ್ರೀ ಶಿವಪಾರ್ವತಿ, ಶ್ರೀ ಗೌರೀಶಂಕರ ಸಮುಚ್ಚಯವನ್ನು ಎ.೨೦ರಂದು ಸಂಜೆ ಕರ್ನಾಟಕ ಸರಕಾರದ ಉಪಮುಖ್ಯಮಂತ್ರಿಗಳು ಮತ್ತು ಜಲ ಸಂಪನ್ಮೂಲ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿ ಲೋಕಾರ್ಪಣೆಗೈದರು.

ನಂತರ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜ್ಞಾನವಿಕಾಸ ಮಹಿಳಾ ಸಬಲೀಕರಣ ಕಾರ್ಯಕ್ರಮದ ಅಧ್ಯಕ್ಷೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಉಜಿರೆ ಎಸ್‌ಡಿಎಂ ಎಜ್ಯಕೇಶನಲ್ ಸೊಸೈಟಿ ಉಪಾಧ್ಯಕ್ಷ ಡಿ.ಸುರೇಂದ್ರ ಕುಮಾರ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕಟ್ಟಡ ಅಭಿಯಂತರ ಮಂಜುಕೀತ೯ನ್, ಕಾಮಗಾರಿ ವ್ಯವಸ್ಥಾಪಕ ಯಶೋಧರ, ಕಟ್ಟಡ ಮೇಲ್ವಿಚಾರಕ ನಿಖಲ್ ಕುಮಾರ್ ಇವರನ್ನು ಸನ್ಮಾನಿಸಲಾಯಿತು.


ಉಜಿರೆ ಎಸ್‌ಡಿಎಂ ಎಜ್ಯುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಕು.ಚಿನ್ಮಯಿ
ಅನ್ನಪೂರ್ಣ ಛತ್ರ ವ್ಯವಸ್ಥಾಪಕ ಜಿ.ಸುಬ್ರಹ್ಮಣ್ಯ ಪ್ರಸಾದ್ ಕಾರ್ಯಕ್ರಮ ನಿರೂಪಿಸಿ, ಡಿ.ಎಂ.ಸಿ ಇಂಜಿನಿಯರ್ ಯಶೋಧರ ಧನ್ಯವಾದವಿತ್ತರು.

Related posts

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya

ಜೂ.9: ಪಡಂಗಡಿಯಲ್ಲಿ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಚಾರ್ಮಾಡಿ ಸ. ಉ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಇತಿಹಾಸ ಪ್ರಸಿದ್ದ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ಬ್ರಹ್ಮಕುಂಭಾಭಿಷೇಕ: ಅಧ್ಯಕ್ಷರಾಗಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಕಾರ್ಯಾಧ್ಯಕ್ಷರಾಗಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya

ವಿಶ್ವ ಜಾಂಬೂರಿಗೆ ಎಕ್ಸೆಲ್ ನ ವಿದ್ಯಾರ್ಥಿಗಳು ಆಯ್ಕೆ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya
error: Content is protected !!