24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಕುಂಜರ್ಪದಲ್ಲಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಬ್ರಹ್ಮಶ್ರೀ ಕೆ.ಎಸ್. ನಿತ್ಯಾನಂದ ಗುರುಗಳ ಶುಭಾಶೀರ್ವಾದಗಳೊಂದಿಗೆ ಮತ್ತು ಮಹೇಶ್ ಶೆಟ್ಟಿ ತಿಮರೋಡಿಯವರ ನೇತೃತ್ವದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಮೇಳದವರಿಂದ ಎ.20ರಂದು ಉಜಿರೆಯ ಕುಂಜರ್ಪದಲ್ಲಿ ವಿದ್ಯುದೀಪಾಲಂಕೃತವಾದ ಭವ್ಯ ರಂಗಮಂಟಪದಲ್ಲಿ 3ನೇ ವರ್ಷದ ಯಕ್ಷಗಾನ ಬಯಲಾಟ ನಡೆಯಿತು.

ಈ ಸಂದರ್ಭದಲ್ಲಿ ಇತ್ತೀಚೆಗೆ ನಿವೃತ್ತಿಯನ್ನು ಹೊಂದಿದ ಯೋಧ ಕರುಣಾಕರ ಶೆಟ್ಟಿ ಗೋಳಿತೊಟ್ಟು ರವರನ್ನು ಗೌರವಿಸಲಾಯಿತು. ಹಾಗೂ ಕಳೆದ ಕೆಲ ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಸುರೇಂದ್ರ ರವರ ಹೆಚ್ಚಿನ ಚಿಕಿತ್ಸೆಗೆ ಧನ ಸಹಾಯವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಅಧ್ಯಕ್ಷ ಅನೀಲ್ ಕುಮಾರ್ ಅಂತರ, ಕಾರ್ಯದರ್ಶಿ ಮನೋಜ್ ಕುಂಜರ್ಪ, ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಯಕ್ಷಗಾನ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

Suddi Udaya

ನಿಡ್ಲೆ ಬಸ್ಟ್ ಸ್ಟಾಂಡ್ ಬಳಿ ಸಂಪೂರ್ಣ ಹದಗೆಟ್ಟ ರಸ್ತೆ: ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಒತ್ತಾಯ

Suddi Udaya

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

Suddi Udaya

ಆರಂಬೋಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಬಿರ್ವೆರ್ ಕುಡ್ಲದ ಸ್ಥಾಪಕ ,ಯುವ ನಾಯಕ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಮತಪ್ರಚಾರ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya
error: Content is protected !!