March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 12 ವಿದ್ಯಾರ್ಥಿಗಳಿಗೆ 99 ಪರ್ಸೆಂಟೇಲ್

ಮೂಡುಬಿದಿರೆ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) ೨೦೨೫ ಅರ್ಹತಾ ಪರೀಕ್ಷೆಯ ಎರಡನೆಯ ಹಂತದ ಫಲಿತಾಂಶ ಪ್ರಕಟಗೊಂಡಿದ್ದು ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಅಪ್ರತಿಮ ಸಾಧನೆ ಮಾಡುವ ಮೂಲಕ ಸರ್ವಶ್ರೇಷ್ಠ ಫಲಿತಾಂಶವನ್ನು ತಂದಿದ್ದಾರೆ.


ವಿದ್ಯಾರ್ಥಿಯಾದ ಸಮೃದ್ಧ್ ಎಸ್. ಕುಂದರಗಿ (೯೯.೭೯೦೭೨೦೧), ಅಬ್ದುಲ್ ಜಬ್ಬರ್ (೯೯.೭೨೭೩೪೪೫), ಯಶವಂತ ಬಿ (೯೯.೭೦೨೯೬೮೭), ಸುದೇಶ್ ದತ್ತಾತ್ರೇಯ ಕಿಲ್ಲೇದಾರ್ (೯೯.೬೧೮೮೬೮೭), ನೂತನ ಆರ್. ಗೌಡ (೯೯.೫೯೦೦೦೦೦), ಮಹದೇವ್ ಎಲ್ (೯೯.೫೩೩೧೦೯೩), ಗಣೇಶ್ (೯೯.೫೦೬೨೧೯೮), ಮಿಲಿಂದ್ ವಿನಯಕ್ ಶೇಟ್ (೯೯.೪೪೫೫೬೭೨), ಸೋಮನಗೌಡ ಅಸ್ಕಿ (೯೯.೪೦೩೯೧೭೯), ಪುಷ್ಪಕ್ ಎ. ಆರ್ (೯೯.೨೮೬೨೦೫೨). ಉಜ್ವಲ್ ಬಲ್ಲಾಳ್(೯೯.೨೧೦೪೬೪೭), ಶಶಾಂಕ್ (೯೯.೦೪೩೮೦೦೧). ವಿದ್ಯಾರ್ಥಿಗಳು ವಿಷಯವಾರು ಫಲಿತಾಂಶ ದೊಂದಿಗೆ ಉತ್ತಮ ಸಾಧನೆ ಮಾಡಿದ್ದಾರೆ.

ನ್ಯೂ ವೈಬ್ರೆಂಟ್ ಪಿಯು ಕಾಲೇಜು ಪಿಯು ವಿಜ್ಞಾನ ಶಿಕ್ಷಣದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾದ ಅತ್ಯುತ್ತಮ ಪೂರಕ ತರಬೇತಿಯನ್ನು ನೀಡುತ್ತಿದೆ ಎಂಬುವುದಕ್ಕೆ ಈ ಫಲಿತಾಂಶವೇ ಸಾಕ್ಷಿಯಾಗಿದೆ. ಸಂಸ್ಥೆಯು ಆರಂಭದ ವರ್ಷದಿಂದಲೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶ ಗಳಿಸುವ ಮೂಲಕ ಉತ್ತಮ ಶಿಕ್ಷಣವನ್ನ ನೀಡುತ್ತಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ನಿರ್ದೇಶಕರುಗಳು, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

Suddi Udaya

ಸಚಿವ ದಿನೇಶ್ ಗುಂಡೂರಾವ್‌ ಅವರ ಟಿಪ್ಪಣಿ ಆಧರಿಸಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವುದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

Suddi Udaya

ಉಜಿರೆ ಎಸ್ ಡಿ ಎಂ ಪಿ.ಯು ಕಾಲೇಜಿನಲ್ಲಿ ಯೋಗ ಶಿಬಿರ ಸಮಾರೋಪ 

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya

ಕಾಶಿಬೆಟ್ಟು ನಿವಾಸಿ ಶತಾಯುಷಿ ಚೆಲುವಮ್ಮ ನಿಧನ

Suddi Udaya
error: Content is protected !!