23.8 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 12 ವಿದ್ಯಾರ್ಥಿಗಳಿಗೆ 99 ಪರ್ಸೆಂಟೇಲ್

ಮೂಡುಬಿದಿರೆ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) ೨೦೨೫ ಅರ್ಹತಾ ಪರೀಕ್ಷೆಯ ಎರಡನೆಯ ಹಂತದ ಫಲಿತಾಂಶ ಪ್ರಕಟಗೊಂಡಿದ್ದು ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಅಪ್ರತಿಮ ಸಾಧನೆ ಮಾಡುವ ಮೂಲಕ ಸರ್ವಶ್ರೇಷ್ಠ ಫಲಿತಾಂಶವನ್ನು ತಂದಿದ್ದಾರೆ.


ವಿದ್ಯಾರ್ಥಿಯಾದ ಸಮೃದ್ಧ್ ಎಸ್. ಕುಂದರಗಿ (೯೯.೭೯೦೭೨೦೧), ಅಬ್ದುಲ್ ಜಬ್ಬರ್ (೯೯.೭೨೭೩೪೪೫), ಯಶವಂತ ಬಿ (೯೯.೭೦೨೯೬೮೭), ಸುದೇಶ್ ದತ್ತಾತ್ರೇಯ ಕಿಲ್ಲೇದಾರ್ (೯೯.೬೧೮೮೬೮೭), ನೂತನ ಆರ್. ಗೌಡ (೯೯.೫೯೦೦೦೦೦), ಮಹದೇವ್ ಎಲ್ (೯೯.೫೩೩೧೦೯೩), ಗಣೇಶ್ (೯೯.೫೦೬೨೧೯೮), ಮಿಲಿಂದ್ ವಿನಯಕ್ ಶೇಟ್ (೯೯.೪೪೫೫೬೭೨), ಸೋಮನಗೌಡ ಅಸ್ಕಿ (೯೯.೪೦೩೯೧೭೯), ಪುಷ್ಪಕ್ ಎ. ಆರ್ (೯೯.೨೮೬೨೦೫೨). ಉಜ್ವಲ್ ಬಲ್ಲಾಳ್(೯೯.೨೧೦೪೬೪೭), ಶಶಾಂಕ್ (೯೯.೦೪೩೮೦೦೧). ವಿದ್ಯಾರ್ಥಿಗಳು ವಿಷಯವಾರು ಫಲಿತಾಂಶ ದೊಂದಿಗೆ ಉತ್ತಮ ಸಾಧನೆ ಮಾಡಿದ್ದಾರೆ.

ನ್ಯೂ ವೈಬ್ರೆಂಟ್ ಪಿಯು ಕಾಲೇಜು ಪಿಯು ವಿಜ್ಞಾನ ಶಿಕ್ಷಣದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾದ ಅತ್ಯುತ್ತಮ ಪೂರಕ ತರಬೇತಿಯನ್ನು ನೀಡುತ್ತಿದೆ ಎಂಬುವುದಕ್ಕೆ ಈ ಫಲಿತಾಂಶವೇ ಸಾಕ್ಷಿಯಾಗಿದೆ. ಸಂಸ್ಥೆಯು ಆರಂಭದ ವರ್ಷದಿಂದಲೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶ ಗಳಿಸುವ ಮೂಲಕ ಉತ್ತಮ ಶಿಕ್ಷಣವನ್ನ ನೀಡುತ್ತಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ನಿರ್ದೇಶಕರುಗಳು, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

Suddi Udaya

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ರೆಖ್ಯ ಶಾಲಾ ಪ್ರಾರಂಭೋತ್ಸವ

Suddi Udaya

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

Suddi Udaya
error: Content is protected !!