24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಬಂಧ ಬ್ರಹ್ಮಕಲಶೋತ್ಸವ

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಲಾಯಿಲ ಬೆಳ್ತಂಗಡಿ ಇಲ್ಲಿ ನಡೆಯುತ್ತಿರುವ ಶ್ರೀ ರಾಮಚಂದ್ರ ಮುಖ್ಯಪ್ರಾಣ ಸಹಿತ ಶ್ರೀ ರಾಘವೇಂದ್ರ ಸ್ವಾಮಿಗಳ ಮೃತ್ಹಿಕ ಬೃಂದಾವನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಥಮ ದಿನದ ಕಾರ್ಯಕ್ರಮವನ್ನು ಬ್ರಹ್ಮಶ್ರೀ ವೇದಮೂರ್ತಿ ಕಾರ್ಕಳ ಶ್ರೀ ಭಾರತೀಯ ರಮಣ ಆಚಾರ್ಯರ ಮಾರ್ಗದರ್ಶನದಲ್ಲಿ ಕ್ಷೇತ್ರದ ಪ್ರಧಾನ ಸಂಘ ಅರ್ಚಕರಾದ ವೇದಮೂರ್ತಿ ಕುಂಟಿನೀ ರಾಘವೇಂದ್ರ ಭಾಂಗಿಣ್ಣಾಯರ ನೇತೃತ್ವದಲ್ಲಿ ಎ.20 ರಂದು ನಡೆಯಿತು.

ಶ್ರೀ ರಾಘವೇಂದ್ರ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಬ್ರಹ್ಮಕ ಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಮ್,
ನಾರಾಯಣ ಬೇಗೂರು, ವಿಆರ್ ನಾಯಕ್ ,ಕೃಷ್ಣಪ್ಪ ಪೂಜಾರಿ, ಮಹಾಬಲ ಶೆಟ್ಟಿ , ಸೋಮೇಗೌಡ, ವಸಂತ ಸುವರ್ಣ, ಮುಂತಾದ ಹಿರಿಯರ ಸಮ್ಮುಖದಲ್ಲಿ ದೀಪ ಬೆಳಗಿಸುವ ಮುಖಾಂತರ ಮಹಿಳೆಯರ ಭಜನಾ ಕಮ್ಮಟಗಳ ಒಗ್ಗೂಡುವಿಕೆಯಿಂದ ಪ್ರಾರಂಭವಾಯಿತು.

ಧಾರ್ಮಿಕ ಸಭಾ ಕಾರ್ಯಕ್ರಮ ಅಧ್ಯಕ್ಷತೆಯನ್ನು ರಾಘವೇಂದ್ರ ಸೇವಾ ಪ್ರತಿಷ್ಠಾನದ ಟ್ರಸ್ಟಿ ಉಮಾ ರಾವ್ ವಹಿಸಿದ್ದರು‌. ಜಿ‌ಪಂ ಮಾಜ ಸದಸ್ಯೆ ಲೋಕೇಶ್ವರಿ ವಿನಯ ಚಂದ್ರ ಗೌಡ, ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಸವಿತಾ ಜಯದೇವ್, ಹಿರಿಯರಾದ ಸಂಗೀತ ಹೇರಾಜೆ, ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷೆ ಸುಭಾಷಿಣಿ ಶೆಟ್ಟಿ, ನಿನಾದ ಕ್ಲಾಸಿಕಲ್ ಮುಂಡ್ರುಪ್ಪಾಡಿ ಇದರ ಮುಖ್ಯಸ್ಥೆ ಶ್ರೀದೇವಿ ಸಚಿನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ನಾರಾಯಣ ಬೇಗೂರ್ ರವರು ನೀನಾದ ಕ್ಲಾಸಿಕಲ್ ಮುಂಡ್ರುಪಾಡಿ ಇವರಿಂದ ರಚಿತವಾದ ರಾಘವೇಂದ್ರ ಸ್ವಾಮಿಗಳ ಸ್ತುತಿಯ ಯೂಟ್ಯೂಬನ್ನು ಬಿಡುಗಡೆಗೊಳಿಸಿದರು. ಮೋಕ್ಷ ವಿ ಪೂಜಾರಿ ಕೋಡ್ಲಕ್ಕೆ ಸ್ವಾಗತಿಸಿ ಪ್ರಸ್ತಾವಿಸಿದರು.ಸುಧಾ ಆರ್ ಸಾಲಿಯಾನ್ ಮತ್ತು ಜಯಾನಂದ ಲಾಯಿಲ ನಿರೂಪಿಸಿದರು. ಸೌಮ್ಯ ಲಾಯಿಲ ಸಹಕರಿಸಿದರು. ಸುಶೀಲಾ ಎಸ್ ಹೆಗ್ಡೆ ವಂದಿಸಿದರು.

Related posts

ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹಕ್ಕೆ ಚಾಲನೆ:

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

Suddi Udaya

ತಣ್ಣೀರುಪಂತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya

ಮಚ್ಚಿನ: ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya
error: Content is protected !!