ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾಲಾಡಿ: ಕೊಲ್ಪೆದಬೈಲುನಲ್ಲಿ ಹಾಡಹಾಗಲೇ ಮನೆಗೆ ನುಗ್ಗಿದ್ದ ಕಳ್ಳರು: ಚಿನ್ನಾಭರಣ ಸೇರಿ ನಗದು ಕಳವು

ಮಾಲಾಡಿ : ಇಲ್ಲಿಯ ಕೊಲ್ಪೆದಬೈಲು ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಾಡಹಾಗಲೇ ಕಳ್ಳರು ಮನೆಗೆ ನುಗ್ಗಿ ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ರೂ 30,000/- ವನ್ನು ಕಳವು ಗೈದಿರುವ ಘಟನೆ ಎ.20 ರಂದು ನಡೆದಿದೆ.

ಘಟನೆ ವಿವರ: ಮಾಲಾಡಿ ಕೊಲ್ಪೆದಬೈಲು ನಿವಾಸಿ ಶ್ರೀಮತಿ ವಸಂತಿ ಹೆಗ್ಡೆ ಎಂಬವರ ದೂರಿನಂತೆ ವಸಂತಿ ಹೆಗ್ಡೆ, ಅವರ ಮಗ ಹಾಗೂ ಸೊಸೆ ಎ.20 ರಂದು ಬೆಳ್ತಂಗಡಿಗೆ ತೆರಳಿದ್ದು ಸಂಜೆ ವಾಪಾಸು ಮನೆಗೆ ಬಂದು ನೋಡಿದಾಗ, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ವಸಂತಿ ಹೆಗ್ಡೆರವರ ಮನೆಯ ಮುಂದಿನ ಬಾಗಿಲಿಗೆ ಹಾಕಿರುವ ಬೀಗದ ಕೊಂಡಿಯನ್ನು ಮುರಿದು ಮನೆಯೊಳಗೆ ಪ್ರವೇಶಿಸಿ ವಸಂತಿ ಹೆಗ್ಡೆ ರವರ ಕೋಣೆಯ ಕಪಾಟುಗಳಲ್ಲಿದ್ದ ಚಿನ್ನಾಭರಣಗಳನ್ನು ಹಾಗೂ ನಗದು ರೂ 30,000/- ಹಣವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಚಿನ್ನಾಭರಣಗಳ ಒಟ್ಟು ತೂಕ 160.5 ಗ್ರಾಂ ಆಗಿದ್ದು ಇದರ ಮೌಲ್ಯ ರೂ 13,72,000/- ಆಗಿರುತ್ತದೆ. ನಗದು ಸೇರಿ ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ ರೂ 14,02,000/- ಆಗಿರುತ್ತದೆ.

ಈ ಬಗ್ಗೆ ಪುಂಜಾಲಕಟ್ಟೆ ಠಾಣಾ ಅ.ಕ್ರ 25/2025 ಕಲಂ: 331(3), 305 BNS- 2023 ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ನನ್ನ ಸಮಾಜ ಸೇವೆಯೇ ನನಗೆ ಮುಳುವಾಯಿತು: ಬಳಂಜ ಶಾಲೆಯ ಘಟನೆ ಕುರಿತು ಪ್ರವೀಣ್ ಪೂಜಾರಿ ಲಾಂತ್ಯಾರು ಪ್ರತಿಕ್ರಿಯೆ

Suddi Udaya

ಶಾಸಕರ ಮುತುವರ್ಜಿಯಿಂದ ಪದವು–ಬೊಳ್ಮನಾರ್ ಮುಖ್ಯರಸ್ತೆಗೆ ತುರ್ತು ದುರಸ್ತಿ; ಮಳೆಗಾಲದ ಬಳಿಕ ರೂ.30 ಲಕ್ಷ ವೆಚ್ಚದಲ್ಲಿ ಮರುಡಾಮರೀಕರಣ

Suddi Udaya

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya

ಬೆಳ್ತಂಗಡಿ: ಜಿ ಕೆ ಜಾಕ್‌ಪಾಟ್ – ಸೀಸನ್ 1ರ ಪ್ರಥಮ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಉಜಿರೆಯಲ್ಲಿ ಗಾಲಿಕುರ್ಚಿ ಜಾಥಾ

Suddi Udaya
error: Content is protected !!