23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿಯಲ್ಲಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

ಅರಸಿನಮಕ್ಕಿ : ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಗ್ರಾಮ ಪಂಚಾಯತ್, ಅರಸಿನಮಕ್ಕಿ ಮತ್ತು ‘ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ , ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಅರಸಿನಮಕ್ಕಿ ಹತ್ಯಡ್ಕ ಸಿ. ಎ. ಬ್ಯಾಂಕ್ ಸಭಾಂಗಣದಲ್ಲಿ ಎ.20 ರಂದು ನಡೆಯಿತು.

ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ರಾಘವೇಂದ್ರ ನಾಯಕ್ ಬರ್ಗುಳ ಅರಸಿನಮಕ್ಕಿ ಜನರಿಗೆ ಸ್ವ ಉದ್ಯೋಗ ಮಾಡುವ ಅವಕಾಶವನ್ನು ಕಲ್ಪಿಸಿಕೊಟ್ಟಿರುವುದು ಬಹಳ ಸಂತೋಷದ ವಿಷಯ ಹಾಗೂ ಸ್ವ – ಉದ್ಯೋಗಕ್ಕೆ ಸಮಾಜದಲ್ಲಿ ಹಲವಾರು ಬೇಡಿಕೆಗಳು ಇದ್ದು ಕಲಿತ ವಿದ್ಯೆಯನ್ನು ಮುಂದುವರಿಸಿಕೊಂಡು ಹೋಗಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷೆ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘ ಇದರ ಸಿಇಒ ಶ್ರೀಮತಿ ಸ್ವರ್ಣಗೌರಿ ಟೈಲರಿಂಗ್ ಕಲಿಯುವುದರಿಂದ ಬೇರೆ ಬೇರೆ ರೀತಿಯ ಸ್ವ – ಉದ್ಯೋಗದ ಅವಕಾಶವಿರುತ್ತದೆ.
ಪ್ರಸ್ತುತ ಕಾಲಘಟ್ಟದಲ್ಲಿ ಮಹಿಳೆಯರು ಯಾರಿಗೂ ಅವಲಂಬಿತವಾಗದೆ ಸ್ವಾವಲಂಬಿ ಜೀವನವನ್ನು ನಡೆಸುವುದು ಅತ್ಯಗತ್ಯವೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಟೈಲರಿಂಗ್ ತರಬೇತುದಾರರಾದ ಶ್ರೀಮತಿ ರೇಷ್ಮಾ ಜಯಪ್ರಸಾದ್ ಶೆಟ್ಟಿಗಾರ್ ಎಲ್ಲರಿಗೂ ಶುಭಹಾರೈಸಿ ಸಂತಸ ವ್ಯಕ್ತಪಡಿಸಿದರು.

ಸಂಸ್ಥೆಯ ಪರವಾಗಿ ಶ್ರೀಮತಿ ರೇಷ್ಮಾ ಜಯಪ್ರಸಾದ್ ಶೆಟ್ಟಿಗಾರ್ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಅರಸಿನಮಕ್ಕಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಧೀರ್ ಕುಮಾರ್, ಕನ್ಯಾಡಿ ಸೇವಾಭಾರತಿ ಸಲಹಾ ಮಂಡಳಿ ಸದಸ್ಯ ಉದಯಶಂಕ‌ರ್ ಕೆ, ಸೇವಾಭಾರತಿ ಕಾರ್ಯದರ್ಶಿ ಬಾಲಕೃಷ್ಣ, ಮಾಜಿ ಸದಸ್ಯರು, ತಾಲೂಕು ಪಂಚಾಯತ್ ಶ್ರೀಮತಿ ಮಂಜುಳಾ ಕಾರಂತ್, ಶಿಶಿಲ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಸಖಿ ಶ್ರೀಮತಿ ಧನ್ಯ ಗಣೇಶ್ ಹೊಸ್ತೋಟ ಉಪಸ್ಥಿತರಿದ್ದರು. ಒಟ್ಟು 29 ಮಂದಿ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಶ್ರೀಮತಿ ಭವ್ಯ ಸ್ವಾಗತಿಸಿ, ಡಾಕ್ಯುಮೆಂಟೇಶನ್, ಮಾನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಸುಮ ಕಾರ್ಯಕ್ರಮ ನಿರೂಪಿಸಿ, ಕು. ರಶ್ಮಿತ ಧನ್ಯವಾದವಿತ್ತರು.

Related posts

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

Suddi Udaya

ಅಳದಂಗಡಿ: ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರ ನಿವಾಸಕ್ಕೆ ಭೇಟಿ ನೀಡಿದ ಲಾವಣ್ಯ ಬಳ್ಳಾಲ್

Suddi Udaya

ಟೇಬಲ್ ಟೆನ್ನಿಸ್ ಪಂದ್ಯಾಟ: ಉಜಿರೆ ಎಸ್ ಡಿ ಎಂ ನ್ಯಾಚುರೋಪಥಿ ಚಾಂಪಿಯನ್

Suddi Udaya

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya

ಶಿಬಾಜೆ ಶಾಲಾ ಮಕ್ಕಳಿಗೆ ಓಣಂ ಪ್ರಯುಕ್ತ ಓಣಂ ಭೋಜನ

Suddi Udaya

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya
error: Content is protected !!