25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಪ್ರಾಯೋಜಕತ್ವದಲ್ಲಿ ಸಿಬಿಕೆ ಕಪ್-2025 ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗ ಜಗ್ಗಾಟ ಪಂದ್ಯಾಟ

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಇದರ ಪ್ರಾಯೋಜಕತ್ವದಲ್ಲಿ ಸಿಬಿಕೆ ಕಪ್-2025 ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ರಾಷ್ಟ್ರಮಟ್ಟದ ಮುಕ್ತ ಹಗ್ಗ ಜಗ್ಗಾಟ ಪಂದ್ಯಾಟವು ಸ.ಹಿ.ಪ್ರಾ. ಶಾಲಾ ಮೈದಾನ ಕಾಯರ್ತಡ್ಕದಲ್ಲಿ ಎ.20ರಂದು ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಅನಿಲ್ ಎ.ಜೆ ಉದ್ಘಾಟಿಸಿ ಶುಭಹಾರೈಸಿದರು. ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ಅಧ್ಯಕ್ಷ ಜೋಸೆಫ್ ಕೆ.ಡಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕಳೆಂಜ ಗ್ರಾ.ಪಂ. ಉಪಾಧ್ಯಕ್ಷ ಮಂಜುನಾಥ ಹೆಚ್, ಕಳೆಂಜ ಸ.ಹಿ.ಪ್ರಾ ಶಾಲೆ ಮುಖ್ಯೋಪಾಧ್ಯಾಯರು ಕೃಷ್ಣಪ್ಪ, ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಎಂ.ಡಿ. ಜನಾರ್ದನ್, ಕಳೆಂಜ ಕ್ರಿಶ್ಚಿಯನ್ ಬ್ರದರ್ ಉಪಾಧ್ಯಕ್ಷ ಶಾಜಿ ತೋಮಸ್, ಕಳೆಂಜ ಕ್ರಿಶ್ಚಿಯನ್ ಬ್ರದರ್ ಕಾರ್ಯದರ್ಶಿ ತೋಮಸ್ ಪಿ.ಡಿ, ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಕೋಶಾಧಿಕಾರಿ ಮಾಥ್ಯು ಕೆ.ಕೆ. ಉಪಸ್ಥಿತರಿದ್ದರು.

ಗೌರವಾಧ್ಯಕ್ಷ ಸೆಭಾಸ್ಟಿನ್ ಪಿ.ಟಿ ಸ್ವಾಗತಿಸಿದರು. ಸಿಜೋ ಜೋಸೆಫ್ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಲಾಯಿತು.

Related posts

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ, ಉದ್ಯಮಿ ಪೃಥ್ವಿ ರಂಜನ್ ರಾವ್ ಹೃದಯಾಘಾತದಿಂದ ನಿಧನ

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ದ್ವಿತೀಯ ಪಿಯುಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅನನ್ಯ ರಿಗೆ ಜೆಸಿಐ ಕೊಕ್ಕಡ ಕಪಿಲ ಘಟಕದಿಂದ ಸನ್ಮಾನ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ 6ನೇ ವರ್ಷದ ದೀಪಾವಳಿ ದೋಸೆ ಹಬ್ಬ ಹಾಗೂ ನಮೋ ಮ್ಯಾರಥಾನ್ ಪೂರ್ವಭಾವಿ ಸಭೆ

Suddi Udaya

ಉಜಿರೆ: ಶ್ರೀ ಧ.ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ವ್ಯಾಪಾರ ಮೇಳ

Suddi Udaya
error: Content is protected !!