July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಪ್ರಾಯೋಜಕತ್ವದಲ್ಲಿ ಸಿಬಿಕೆ ಕಪ್-2025 ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗ ಜಗ್ಗಾಟ ಪಂದ್ಯಾಟ

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಇದರ ಪ್ರಾಯೋಜಕತ್ವದಲ್ಲಿ ಸಿಬಿಕೆ ಕಪ್-2025 ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ರಾಷ್ಟ್ರಮಟ್ಟದ ಮುಕ್ತ ಹಗ್ಗ ಜಗ್ಗಾಟ ಪಂದ್ಯಾಟವು ಸ.ಹಿ.ಪ್ರಾ. ಶಾಲಾ ಮೈದಾನ ಕಾಯರ್ತಡ್ಕದಲ್ಲಿ ಎ.20ರಂದು ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಅನಿಲ್ ಎ.ಜೆ ಉದ್ಘಾಟಿಸಿ ಶುಭಹಾರೈಸಿದರು. ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ಅಧ್ಯಕ್ಷ ಜೋಸೆಫ್ ಕೆ.ಡಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕಳೆಂಜ ಗ್ರಾ.ಪಂ. ಉಪಾಧ್ಯಕ್ಷ ಮಂಜುನಾಥ ಹೆಚ್, ಕಳೆಂಜ ಸ.ಹಿ.ಪ್ರಾ ಶಾಲೆ ಮುಖ್ಯೋಪಾಧ್ಯಾಯರು ಕೃಷ್ಣಪ್ಪ, ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಎಂ.ಡಿ. ಜನಾರ್ದನ್, ಕಳೆಂಜ ಕ್ರಿಶ್ಚಿಯನ್ ಬ್ರದರ್ ಉಪಾಧ್ಯಕ್ಷ ಶಾಜಿ ತೋಮಸ್, ಕಳೆಂಜ ಕ್ರಿಶ್ಚಿಯನ್ ಬ್ರದರ್ ಕಾರ್ಯದರ್ಶಿ ತೋಮಸ್ ಪಿ.ಡಿ, ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಕೋಶಾಧಿಕಾರಿ ಮಾಥ್ಯು ಕೆ.ಕೆ. ಉಪಸ್ಥಿತರಿದ್ದರು.

ಗೌರವಾಧ್ಯಕ್ಷ ಸೆಭಾಸ್ಟಿನ್ ಪಿ.ಟಿ ಸ್ವಾಗತಿಸಿದರು. ಸಿಜೋ ಜೋಸೆಫ್ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಲಾಯಿತು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

Suddi Udaya

ಆಮಂತ್ರಣ ವೇದಿಕೆಯ ಅಧ್ಯಕ್ಷೆ ವಿದ್ಯಾಶ್ರೀ ಅಡೂರ್ ರವರ “ಕವಿತೆಯೆoಬ ಕೇದಗೆ” ಭಾವಗೀತೆಯ ಧ್ವನಿ ಮುದ್ರಣ ಬಿಡುಗಡೆ

Suddi Udaya

ತುಳುಕೂಟ ಇಸ್ರೇಲ್ ವತಿಯಿಂದ ಮಂಜುಶ್ರೀ ಸೀನಿಯರ್ ಛೇಂಬರ್ ಬೆಳ್ತಂಗಡಿ ಆಶ್ರಯದಲ್ಲಿ ಕಿಲ್ಲೂರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ  ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

Suddi Udaya
error: Content is protected !!