April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 12 ವಿದ್ಯಾರ್ಥಿಗಳಿಗೆ 99 ಪರ್ಸೆಂಟೇಲ್

ಮೂಡುಬಿದಿರೆ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) ೨೦೨೫ ಅರ್ಹತಾ ಪರೀಕ್ಷೆಯ ಎರಡನೆಯ ಹಂತದ ಫಲಿತಾಂಶ ಪ್ರಕಟಗೊಂಡಿದ್ದು ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಅಪ್ರತಿಮ ಸಾಧನೆ ಮಾಡುವ ಮೂಲಕ ಸರ್ವಶ್ರೇಷ್ಠ ಫಲಿತಾಂಶವನ್ನು ತಂದಿದ್ದಾರೆ.


ವಿದ್ಯಾರ್ಥಿಯಾದ ಸಮೃದ್ಧ್ ಎಸ್. ಕುಂದರಗಿ (೯೯.೭೯೦೭೨೦೧), ಅಬ್ದುಲ್ ಜಬ್ಬರ್ (೯೯.೭೨೭೩೪೪೫), ಯಶವಂತ ಬಿ (೯೯.೭೦೨೯೬೮೭), ಸುದೇಶ್ ದತ್ತಾತ್ರೇಯ ಕಿಲ್ಲೇದಾರ್ (೯೯.೬೧೮೮೬೮೭), ನೂತನ ಆರ್. ಗೌಡ (೯೯.೫೯೦೦೦೦೦), ಮಹದೇವ್ ಎಲ್ (೯೯.೫೩೩೧೦೯೩), ಗಣೇಶ್ (೯೯.೫೦೬೨೧೯೮), ಮಿಲಿಂದ್ ವಿನಯಕ್ ಶೇಟ್ (೯೯.೪೪೫೫೬೭೨), ಸೋಮನಗೌಡ ಅಸ್ಕಿ (೯೯.೪೦೩೯೧೭೯), ಪುಷ್ಪಕ್ ಎ. ಆರ್ (೯೯.೨೮೬೨೦೫೨). ಉಜ್ವಲ್ ಬಲ್ಲಾಳ್(೯೯.೨೧೦೪೬೪೭), ಶಶಾಂಕ್ (೯೯.೦೪೩೮೦೦೧). ವಿದ್ಯಾರ್ಥಿಗಳು ವಿಷಯವಾರು ಫಲಿತಾಂಶ ದೊಂದಿಗೆ ಉತ್ತಮ ಸಾಧನೆ ಮಾಡಿದ್ದಾರೆ.

ನ್ಯೂ ವೈಬ್ರೆಂಟ್ ಪಿಯು ಕಾಲೇಜು ಪಿಯು ವಿಜ್ಞಾನ ಶಿಕ್ಷಣದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾದ ಅತ್ಯುತ್ತಮ ಪೂರಕ ತರಬೇತಿಯನ್ನು ನೀಡುತ್ತಿದೆ ಎಂಬುವುದಕ್ಕೆ ಈ ಫಲಿತಾಂಶವೇ ಸಾಕ್ಷಿಯಾಗಿದೆ. ಸಂಸ್ಥೆಯು ಆರಂಭದ ವರ್ಷದಿಂದಲೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶ ಗಳಿಸುವ ಮೂಲಕ ಉತ್ತಮ ಶಿಕ್ಷಣವನ್ನ ನೀಡುತ್ತಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ನಿರ್ದೇಶಕರುಗಳು, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಮಚ್ಚಿನ ಸರ್ಕಾರಿ ಪ್ರೌಢ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಪ್ರದಾನ

Suddi Udaya

ಮರೋಡಿ: ಕೂಕ್ರಬೆಟ್ಟು ಶಾಲೆಗೆ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ

Suddi Udaya

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಎಂ.ಡಿ.ಎಸ್ ಪರೀಕ್ಷೆ: ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್‌ ಕುಲಾಲ್ ರವರಿಗೆ 5ನೇ ರ್‍ಯಾಂಕ್

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya
error: Content is protected !!