23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 12 ವಿದ್ಯಾರ್ಥಿಗಳಿಗೆ 99 ಪರ್ಸೆಂಟೇಲ್

ಮೂಡುಬಿದಿರೆ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) ೨೦೨೫ ಅರ್ಹತಾ ಪರೀಕ್ಷೆಯ ಎರಡನೆಯ ಹಂತದ ಫಲಿತಾಂಶ ಪ್ರಕಟಗೊಂಡಿದ್ದು ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಅಪ್ರತಿಮ ಸಾಧನೆ ಮಾಡುವ ಮೂಲಕ ಸರ್ವಶ್ರೇಷ್ಠ ಫಲಿತಾಂಶವನ್ನು ತಂದಿದ್ದಾರೆ.


ವಿದ್ಯಾರ್ಥಿಯಾದ ಸಮೃದ್ಧ್ ಎಸ್. ಕುಂದರಗಿ (೯೯.೭೯೦೭೨೦೧), ಅಬ್ದುಲ್ ಜಬ್ಬರ್ (೯೯.೭೨೭೩೪೪೫), ಯಶವಂತ ಬಿ (೯೯.೭೦೨೯೬೮೭), ಸುದೇಶ್ ದತ್ತಾತ್ರೇಯ ಕಿಲ್ಲೇದಾರ್ (೯೯.೬೧೮೮೬೮೭), ನೂತನ ಆರ್. ಗೌಡ (೯೯.೫೯೦೦೦೦೦), ಮಹದೇವ್ ಎಲ್ (೯೯.೫೩೩೧೦೯೩), ಗಣೇಶ್ (೯೯.೫೦೬೨೧೯೮), ಮಿಲಿಂದ್ ವಿನಯಕ್ ಶೇಟ್ (೯೯.೪೪೫೫೬೭೨), ಸೋಮನಗೌಡ ಅಸ್ಕಿ (೯೯.೪೦೩೯೧೭೯), ಪುಷ್ಪಕ್ ಎ. ಆರ್ (೯೯.೨೮೬೨೦೫೨). ಉಜ್ವಲ್ ಬಲ್ಲಾಳ್(೯೯.೨೧೦೪೬೪೭), ಶಶಾಂಕ್ (೯೯.೦೪೩೮೦೦೧). ವಿದ್ಯಾರ್ಥಿಗಳು ವಿಷಯವಾರು ಫಲಿತಾಂಶ ದೊಂದಿಗೆ ಉತ್ತಮ ಸಾಧನೆ ಮಾಡಿದ್ದಾರೆ.

ನ್ಯೂ ವೈಬ್ರೆಂಟ್ ಪಿಯು ಕಾಲೇಜು ಪಿಯು ವಿಜ್ಞಾನ ಶಿಕ್ಷಣದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾದ ಅತ್ಯುತ್ತಮ ಪೂರಕ ತರಬೇತಿಯನ್ನು ನೀಡುತ್ತಿದೆ ಎಂಬುವುದಕ್ಕೆ ಈ ಫಲಿತಾಂಶವೇ ಸಾಕ್ಷಿಯಾಗಿದೆ. ಸಂಸ್ಥೆಯು ಆರಂಭದ ವರ್ಷದಿಂದಲೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶ ಗಳಿಸುವ ಮೂಲಕ ಉತ್ತಮ ಶಿಕ್ಷಣವನ್ನ ನೀಡುತ್ತಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ನಿರ್ದೇಶಕರುಗಳು, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ

Suddi Udaya

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya

ನೆರಿಯ ಗ್ರಾ.ಪಂ. ಅಧ್ಯಕ್ಷರಾಗಿ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆ

Suddi Udaya

ಪಿಲ್ಯ: ಬಾವಿಗೆ ಬಿದ್ದು ಕಾರ್ಮಿಕ ಸಾವು

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya
error: Content is protected !!