30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾಲಾಡಿ: ಕೊಲ್ಪೆದಬೈಲುನಲ್ಲಿ ಹಾಡಹಾಗಲೇ ಮನೆಗೆ ನುಗ್ಗಿದ್ದ ಕಳ್ಳರು: ಚಿನ್ನಾಭರಣ ಸೇರಿ ನಗದು ಕಳವು

ಮಾಲಾಡಿ : ಇಲ್ಲಿಯ ಕೊಲ್ಪೆದಬೈಲು ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಾಡಹಾಗಲೇ ಕಳ್ಳರು ಮನೆಗೆ ನುಗ್ಗಿ ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ರೂ 30,000/- ವನ್ನು ಕಳವು ಗೈದಿರುವ ಘಟನೆ ಎ.20 ರಂದು ನಡೆದಿದೆ.

ಘಟನೆ ವಿವರ: ಮಾಲಾಡಿ ಕೊಲ್ಪೆದಬೈಲು ನಿವಾಸಿ ಶ್ರೀಮತಿ ವಸಂತಿ ಹೆಗ್ಡೆ ಎಂಬವರ ದೂರಿನಂತೆ ವಸಂತಿ ಹೆಗ್ಡೆ, ಅವರ ಮಗ ಹಾಗೂ ಸೊಸೆ ಎ.20 ರಂದು ಬೆಳ್ತಂಗಡಿಗೆ ತೆರಳಿದ್ದು ಸಂಜೆ ವಾಪಾಸು ಮನೆಗೆ ಬಂದು ನೋಡಿದಾಗ, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ವಸಂತಿ ಹೆಗ್ಡೆರವರ ಮನೆಯ ಮುಂದಿನ ಬಾಗಿಲಿಗೆ ಹಾಕಿರುವ ಬೀಗದ ಕೊಂಡಿಯನ್ನು ಮುರಿದು ಮನೆಯೊಳಗೆ ಪ್ರವೇಶಿಸಿ ವಸಂತಿ ಹೆಗ್ಡೆ ರವರ ಕೋಣೆಯ ಕಪಾಟುಗಳಲ್ಲಿದ್ದ ಚಿನ್ನಾಭರಣಗಳನ್ನು ಹಾಗೂ ನಗದು ರೂ 30,000/- ಹಣವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಚಿನ್ನಾಭರಣಗಳ ಒಟ್ಟು ತೂಕ 160.5 ಗ್ರಾಂ ಆಗಿದ್ದು ಇದರ ಮೌಲ್ಯ ರೂ 13,72,000/- ಆಗಿರುತ್ತದೆ. ನಗದು ಸೇರಿ ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ ರೂ 14,02,000/- ಆಗಿರುತ್ತದೆ.

ಈ ಬಗ್ಗೆ ಪುಂಜಾಲಕಟ್ಟೆ ಠಾಣಾ ಅ.ಕ್ರ 25/2025 ಕಲಂ: 331(3), 305 BNS- 2023 ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya

ಉಜಿರೆ ಗ್ರಾ.ಪಂ. ಅಮೃತ ಸಭಾಂಗಣ ಉದ್ಘಾಟನೆ

Suddi Udaya

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕ ಜೆ.ಆರ್ ಲೋಬೋ

Suddi Udaya

ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ

Suddi Udaya
error: Content is protected !!