26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾಲಾಡಿ: ಕೊಲ್ಪೆದಬೈಲುನಲ್ಲಿ ಹಾಡಹಾಗಲೇ ಮನೆಗೆ ನುಗ್ಗಿದ್ದ ಕಳ್ಳರು: ಚಿನ್ನಾಭರಣ ಸೇರಿ ನಗದು ಕಳವು

ಮಾಲಾಡಿ : ಇಲ್ಲಿಯ ಕೊಲ್ಪೆದಬೈಲು ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಾಡಹಾಗಲೇ ಕಳ್ಳರು ಮನೆಗೆ ನುಗ್ಗಿ ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ರೂ 30,000/- ವನ್ನು ಕಳವು ಗೈದಿರುವ ಘಟನೆ ಎ.20 ರಂದು ನಡೆದಿದೆ.

ಘಟನೆ ವಿವರ: ಮಾಲಾಡಿ ಕೊಲ್ಪೆದಬೈಲು ನಿವಾಸಿ ಶ್ರೀಮತಿ ವಸಂತಿ ಹೆಗ್ಡೆ ಎಂಬವರ ದೂರಿನಂತೆ ವಸಂತಿ ಹೆಗ್ಡೆ, ಅವರ ಮಗ ಹಾಗೂ ಸೊಸೆ ಎ.20 ರಂದು ಬೆಳ್ತಂಗಡಿಗೆ ತೆರಳಿದ್ದು ಸಂಜೆ ವಾಪಾಸು ಮನೆಗೆ ಬಂದು ನೋಡಿದಾಗ, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ವಸಂತಿ ಹೆಗ್ಡೆರವರ ಮನೆಯ ಮುಂದಿನ ಬಾಗಿಲಿಗೆ ಹಾಕಿರುವ ಬೀಗದ ಕೊಂಡಿಯನ್ನು ಮುರಿದು ಮನೆಯೊಳಗೆ ಪ್ರವೇಶಿಸಿ ವಸಂತಿ ಹೆಗ್ಡೆ ರವರ ಕೋಣೆಯ ಕಪಾಟುಗಳಲ್ಲಿದ್ದ ಚಿನ್ನಾಭರಣಗಳನ್ನು ಹಾಗೂ ನಗದು ರೂ 30,000/- ಹಣವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಚಿನ್ನಾಭರಣಗಳ ಒಟ್ಟು ತೂಕ 160.5 ಗ್ರಾಂ ಆಗಿದ್ದು ಇದರ ಮೌಲ್ಯ ರೂ 13,72,000/- ಆಗಿರುತ್ತದೆ. ನಗದು ಸೇರಿ ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ ರೂ 14,02,000/- ಆಗಿರುತ್ತದೆ.

ಈ ಬಗ್ಗೆ ಪುಂಜಾಲಕಟ್ಟೆ ಠಾಣಾ ಅ.ಕ್ರ 25/2025 ಕಲಂ: 331(3), 305 BNS- 2023 ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಜಿನಭಜನಾ ಸ್ಪರ್ಧೆ :ಮಂಗಳೂರು ವಲಯ ಮಟ್ಟದಲ್ಲಿ ಅಳದಂಗಡಿ ತಂಡ ತೃತೀಯ ಸ್ಥಾನ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

Suddi Udaya

ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ: ಮತ್ತೊಬ್ಬನ ಗುರುತು ಪತ್ತೆ ಹಚ್ಚಿದ ಎಸ್.ಐ.ಟಿ

Suddi Udaya

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!