25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾಲಾಡಿ: ಕೊಲ್ಪೆದಬೈಲುನಲ್ಲಿ ಹಾಡಹಾಗಲೇ ಮನೆಗೆ ನುಗ್ಗಿದ್ದ ಕಳ್ಳರು: ಚಿನ್ನಾಭರಣ ಸೇರಿ ನಗದು ಕಳವು

ಮಾಲಾಡಿ : ಇಲ್ಲಿಯ ಕೊಲ್ಪೆದಬೈಲು ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಾಡಹಾಗಲೇ ಕಳ್ಳರು ಮನೆಗೆ ನುಗ್ಗಿ ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ರೂ 30,000/- ವನ್ನು ಕಳವು ಗೈದಿರುವ ಘಟನೆ ಎ.20 ರಂದು ನಡೆದಿದೆ.

ಘಟನೆ ವಿವರ: ಮಾಲಾಡಿ ಕೊಲ್ಪೆದಬೈಲು ನಿವಾಸಿ ಶ್ರೀಮತಿ ವಸಂತಿ ಹೆಗ್ಡೆ ಎಂಬವರ ದೂರಿನಂತೆ ವಸಂತಿ ಹೆಗ್ಡೆ, ಅವರ ಮಗ ಹಾಗೂ ಸೊಸೆ ಎ.20 ರಂದು ಬೆಳ್ತಂಗಡಿಗೆ ತೆರಳಿದ್ದು ಸಂಜೆ ವಾಪಾಸು ಮನೆಗೆ ಬಂದು ನೋಡಿದಾಗ, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ವಸಂತಿ ಹೆಗ್ಡೆರವರ ಮನೆಯ ಮುಂದಿನ ಬಾಗಿಲಿಗೆ ಹಾಕಿರುವ ಬೀಗದ ಕೊಂಡಿಯನ್ನು ಮುರಿದು ಮನೆಯೊಳಗೆ ಪ್ರವೇಶಿಸಿ ವಸಂತಿ ಹೆಗ್ಡೆ ರವರ ಕೋಣೆಯ ಕಪಾಟುಗಳಲ್ಲಿದ್ದ ಚಿನ್ನಾಭರಣಗಳನ್ನು ಹಾಗೂ ನಗದು ರೂ 30,000/- ಹಣವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಚಿನ್ನಾಭರಣಗಳ ಒಟ್ಟು ತೂಕ 160.5 ಗ್ರಾಂ ಆಗಿದ್ದು ಇದರ ಮೌಲ್ಯ ರೂ 13,72,000/- ಆಗಿರುತ್ತದೆ. ನಗದು ಸೇರಿ ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ ರೂ 14,02,000/- ಆಗಿರುತ್ತದೆ.

ಈ ಬಗ್ಗೆ ಪುಂಜಾಲಕಟ್ಟೆ ಠಾಣಾ ಅ.ಕ್ರ 25/2025 ಕಲಂ: 331(3), 305 BNS- 2023 ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

Suddi Udaya

ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

Suddi Udaya

ನಾಳೆ (ಮಾ.1): ಕಕ್ಕಿಂಜೆ ವಿದ್ಯುತ್‌ ನಿಲುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya
error: Content is protected !!