September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ


ಇಂದಬೆಟ್ಟು: ಯುವ ಸಂಘಟನೆ ನವ ಭಾರತ್ ಗೆಳೆಯರ ಬಳಗ ಕಲ್ಲಾಜೆ ಇಂದಬೆಟ್ಟು ಇದರ ವಾರ್ಷಿಕ ಮಹಾಸಭೆಯು ಎ 20 ರಂದು ಕಲ್ಲಾಜೆ ಶಾಲಾ ವಠಾರದಲ್ಲಿ ಯತೀಶ್ ನೆರೋಲ್ದಪಲ್ಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಹಾಸಭೆಯ ನಡವಳಿ, ವಾರ್ಷಿಕ ವರದಿ, ಲೆಕ್ಕ ಪತ್ರ ಪರಿಶೋಧನಾ ವರದಿಯನ್ನು ಕಾರ್ಯದರ್ಶಿ ಅವಿನಾಶ್ ಕಲ್ಲಾಜೆ ಸಭೆಗೆ ಮಂಡಿಸಿದರು. ಸದಸ್ಯರ ಸರ್ವಾನುಮತದಿಂದ ಅಂಗೀಕಾರ ಪಡೆಯಲಾಯಿತು. 2025-2026 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಗೌರವಾಧ್ಯಕ್ಷರಾಗಿ ಅರುಣ್ ಕುಮಾರ್ ಕೆಳಗಿನ ಕಲ್ಲಾಜೆ, ಅಧ್ಯಕ್ಷರಾಗಿ ರಮೇಶ್ ನೂಜಿಲೆ, ಕಾರ್ಯದರ್ಶಿಯಾಗಿ ಜಗದೀಶ್ ನೆರೋಲ್ದಪಲ್ಕೆ, ಕೋಶಾಧಿಕಾರಿಯಾಗಿ ಪ್ರತೀಕ್ಷ್ ಹಾನಿಬೆಟ್ಟು, ಉಪಾಧ್ಯಕ್ಷರಾಗಿ ಜಯ ನೂಜಿಲೆ, ಜೊತೆ ಕಾರ್ಯದರ್ಶಿಯಾಗಿ ನಾಗೇಶ್ ಮುಂಡ್ರಬೆಟ್ಟು, ಧಾರ್ಮಿಕ ವಿಭಾಗದ ನಿರ್ದೇಶಕರಾಗಿ ರಾಜೇಶ್ ಹೆಬ್ಬಾರಪಲ್ಕೆ, ಶ್ರೀಕಾಂತ್ ಸೋಮಯ್ಯದಡ್ಡು, ಆರೋಗ್ಯ ವಿಭಾಗದ ನಿರ್ದೇಶಕರಾಗಿ ಪ್ರಜ್ವಲ್ ಇಂದಬೆಟ್ಟು, ಕ್ರೀಡಾ ವಿಭಾಗದ ನಿರ್ದೇಶಕರಾಗಿ ಅವಿನಾಶ್ ಸೋಮಯ್ಯದಡ್ಡು, ಶೈಕ್ಷಣಿಕ ವಿಭಾಗದ ನಿರ್ದೇಶಕರಾಗಿ ನವೀನ್ ನೇತ್ರಾವತಿ ನಗರ, ಮಾಧ್ಯಮ ಮತ್ತು ಪ್ರಚಾರ ವಿಭಾಗದ ನಿರ್ದೇಶಕರಾಗಿ ಸಂದೀಪ್ ಅಲಕ್ಕೆ ಇವರನ್ನು ಆಯ್ಕೆ ಮಾಡಲಾಯಿತು.

ಅವಿನಾಶ್ ಕಲ್ಲಾಜೆ ಸ್ವಾಗತಿಸಿದರು, ಜಗದೀಶ್ ನೆರೋಲ್ದಪಲ್ಕೆ ಧನ್ಯವಾದವಿತ್ತರು.

Related posts

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

Suddi Udaya

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಪ್ತಿ ಗೌಡ ರಾಜ್ಯಕ್ಕೆ ಪ್ರಥಮ

Suddi Udaya

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ:ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಶಿಶಿಲ: ನಾಗನಡ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಕಕ್ಕಿಂಜೆಗೆ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರು ಸಚಿವರಿಗೆ ಅಭಿನಂದನೆ

Suddi Udaya
error: Content is protected !!