July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ


ಇಂದಬೆಟ್ಟು: ಯುವ ಸಂಘಟನೆ ನವ ಭಾರತ್ ಗೆಳೆಯರ ಬಳಗ ಕಲ್ಲಾಜೆ ಇಂದಬೆಟ್ಟು ಇದರ ವಾರ್ಷಿಕ ಮಹಾಸಭೆಯು ಎ 20 ರಂದು ಕಲ್ಲಾಜೆ ಶಾಲಾ ವಠಾರದಲ್ಲಿ ಯತೀಶ್ ನೆರೋಲ್ದಪಲ್ಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಹಾಸಭೆಯ ನಡವಳಿ, ವಾರ್ಷಿಕ ವರದಿ, ಲೆಕ್ಕ ಪತ್ರ ಪರಿಶೋಧನಾ ವರದಿಯನ್ನು ಕಾರ್ಯದರ್ಶಿ ಅವಿನಾಶ್ ಕಲ್ಲಾಜೆ ಸಭೆಗೆ ಮಂಡಿಸಿದರು. ಸದಸ್ಯರ ಸರ್ವಾನುಮತದಿಂದ ಅಂಗೀಕಾರ ಪಡೆಯಲಾಯಿತು. 2025-2026 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಗೌರವಾಧ್ಯಕ್ಷರಾಗಿ ಅರುಣ್ ಕುಮಾರ್ ಕೆಳಗಿನ ಕಲ್ಲಾಜೆ, ಅಧ್ಯಕ್ಷರಾಗಿ ರಮೇಶ್ ನೂಜಿಲೆ, ಕಾರ್ಯದರ್ಶಿಯಾಗಿ ಜಗದೀಶ್ ನೆರೋಲ್ದಪಲ್ಕೆ, ಕೋಶಾಧಿಕಾರಿಯಾಗಿ ಪ್ರತೀಕ್ಷ್ ಹಾನಿಬೆಟ್ಟು, ಉಪಾಧ್ಯಕ್ಷರಾಗಿ ಜಯ ನೂಜಿಲೆ, ಜೊತೆ ಕಾರ್ಯದರ್ಶಿಯಾಗಿ ನಾಗೇಶ್ ಮುಂಡ್ರಬೆಟ್ಟು, ಧಾರ್ಮಿಕ ವಿಭಾಗದ ನಿರ್ದೇಶಕರಾಗಿ ರಾಜೇಶ್ ಹೆಬ್ಬಾರಪಲ್ಕೆ, ಶ್ರೀಕಾಂತ್ ಸೋಮಯ್ಯದಡ್ಡು, ಆರೋಗ್ಯ ವಿಭಾಗದ ನಿರ್ದೇಶಕರಾಗಿ ಪ್ರಜ್ವಲ್ ಇಂದಬೆಟ್ಟು, ಕ್ರೀಡಾ ವಿಭಾಗದ ನಿರ್ದೇಶಕರಾಗಿ ಅವಿನಾಶ್ ಸೋಮಯ್ಯದಡ್ಡು, ಶೈಕ್ಷಣಿಕ ವಿಭಾಗದ ನಿರ್ದೇಶಕರಾಗಿ ನವೀನ್ ನೇತ್ರಾವತಿ ನಗರ, ಮಾಧ್ಯಮ ಮತ್ತು ಪ್ರಚಾರ ವಿಭಾಗದ ನಿರ್ದೇಶಕರಾಗಿ ಸಂದೀಪ್ ಅಲಕ್ಕೆ ಇವರನ್ನು ಆಯ್ಕೆ ಮಾಡಲಾಯಿತು.

ಅವಿನಾಶ್ ಕಲ್ಲಾಜೆ ಸ್ವಾಗತಿಸಿದರು, ಜಗದೀಶ್ ನೆರೋಲ್ದಪಲ್ಕೆ ಧನ್ಯವಾದವಿತ್ತರು.

Related posts

ಎಕ್ಸೆಲ್ ನಲ್ಲಿ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ರಾಜ್ಯೋತ್ಸವ ಆಚರಣೆ ಎಕ್ಸೆಲ್ ವಿದ್ಯಾಸಂಸ್ಥೆ ಸದಾ ಕನ್ನಡದ ಸೇವೆಗೆ ಸಿದ್ಧ: ಸುಮಂತ್ ಕುಮಾರ್ ಜೈನ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಾಲ್ಕೂರು: ಅಸೌಖ್ಯದಿಂದ ಯೈಕುರಿ ವಸಂತಿ ನಿಧನ

Suddi Udaya

ಮನೋಜವಂ ಮಾರುತ ತುಲ್ಯವೇಗಂ; ಅಳದಂಗಡಿಯಲ್ಲಿ ಹನುಮ ನಾಮ ಸ್ಮರಣೆ ಹನುಮೋತ್ಸವ-2025, : ಹನುಮ ಯಾಗಕ್ಕೆ ಚಾಲನೆ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya
error: Content is protected !!