July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಕುಂಜರ್ಪದಲ್ಲಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಬ್ರಹ್ಮಶ್ರೀ ಕೆ.ಎಸ್. ನಿತ್ಯಾನಂದ ಗುರುಗಳ ಶುಭಾಶೀರ್ವಾದಗಳೊಂದಿಗೆ ಮತ್ತು ಮಹೇಶ್ ಶೆಟ್ಟಿ ತಿಮರೋಡಿಯವರ ನೇತೃತ್ವದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಮೇಳದವರಿಂದ ಎ.20ರಂದು ಉಜಿರೆಯ ಕುಂಜರ್ಪದಲ್ಲಿ ವಿದ್ಯುದೀಪಾಲಂಕೃತವಾದ ಭವ್ಯ ರಂಗಮಂಟಪದಲ್ಲಿ 3ನೇ ವರ್ಷದ ಯಕ್ಷಗಾನ ಬಯಲಾಟ ನಡೆಯಿತು.

ಈ ಸಂದರ್ಭದಲ್ಲಿ ಇತ್ತೀಚೆಗೆ ನಿವೃತ್ತಿಯನ್ನು ಹೊಂದಿದ ಯೋಧ ಕರುಣಾಕರ ಶೆಟ್ಟಿ ಗೋಳಿತೊಟ್ಟು ರವರನ್ನು ಗೌರವಿಸಲಾಯಿತು. ಹಾಗೂ ಕಳೆದ ಕೆಲ ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಸುರೇಂದ್ರ ರವರ ಹೆಚ್ಚಿನ ಚಿಕಿತ್ಸೆಗೆ ಧನ ಸಹಾಯವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಅಧ್ಯಕ್ಷ ಅನೀಲ್ ಕುಮಾರ್ ಅಂತರ, ಕಾರ್ಯದರ್ಶಿ ಮನೋಜ್ ಕುಂಜರ್ಪ, ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಯಕ್ಷಗಾನ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಆಯ್ಕೆ

Suddi Udaya

ಅಕ್ರಮ ಕಸ ವಿಲೇವಾರಿ: ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ತಣ್ಣೀರುಪಂತ ವಲಯ, ಕರಾಯ ಕಾರ್ಯಕ್ಷೇತ್ರದ ಬಾಬು ರವರಿಗೆ ರವರಿಗೆ ವೀಲ್ ಚೆಯರ್ ವಿತರಣೆ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆಗೆ (ರಾಜ್ಯಪಠ್ಯಕ್ರಮ) ಶೇ. 100 ಫಲಿತಾಂಶ

Suddi Udaya
error: Content is protected !!