23.8 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಸಮಾರೋಪ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಆವರಣದಲ್ಲಿ ಉರೂಸ್ ಸಮಾರೋಪ ಸಮಾರಂಭವು ವಿಜ್ರಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜುಮಾ ಮಸೀದಿ ಅಧ್ಯಕ್ಷ ಮುಹಮ್ಮದ್ ಬಂದಾರು ವಹಿಸಿದ್ದರು. ಜುಮಾ ಮಸೀದಿ ಬಟ್ಲಡ್ಕ ಗೌರವ ಅಧ್ಯಕ್ಷ ಶೈಖುನಾ ಸಾದಾತ್ ತಂಙಲ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಸ್ತವಿಕ ಭಾಷಣ ಮರ್ಕಸ್ ಗಾರ್ಡನ್ ಪೂನೂರು ಕೇರಳ ಇದರ ಜನರಲ್ ಮೇನೇಜರ್ ಅಬೂಸ್ವಾಲಿಹ್ ಸಖಾಫಿ ನೆರವೇರಿಸಿದರು.

ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆರಿಫ್ ಮದನಿಯವರು ಶುಭ ಹಾರೈಸಿದರು.
ವೇದಿಕೆಯಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದರು. ಮುಖ್ಯ ಪ್ರಭಾಷಣ ಮುಳ್ಳೂರುಕೆರೆ ಮುಹಮ್ಮದ್ ಅಲಿ ಸಖಾಫಿ ನಡೆಸಿಕೊಟ್ಟರು. ಕಾರ್ಯಕ್ರಮ ದಲ್ಲಿ ಜುಮಾ ಮಸೀದಿ ಬಟ್ಲಡ್ಕ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಸ್ವಾಗತಿಸಿದರು.
ರಹೀಂ ಬಟ್ಲಡ್ಕ ಧನ್ಯವಾದ ಸಮರ್ಪಿಸಿದರು.

Related posts

ಬಳಂಜ ಶ್ರೀ ಗಣೇಶೋತ್ಸವ ಪೂರ್ವಭಾವಿ ಸಭೆ, ವಿವಿಧ ಸಮಿತಿಗಳ‌ ರಚನೆ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

Suddi Udaya

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

Suddi Udaya

ಅಂಡಿಂಜೆಯಲ್ಲಿ ಬೈಕ್ ಅಪಘಾತ: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya
error: Content is protected !!