24.6 C
ಪುತ್ತೂರು, ಬೆಳ್ತಂಗಡಿ
April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಬಂಧ ಬ್ರಹ್ಮಕಲಶೋತ್ಸವ

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಲಾಯಿಲ ಬೆಳ್ತಂಗಡಿ ಇಲ್ಲಿ ನಡೆಯುತ್ತಿರುವ ಶ್ರೀ ರಾಮಚಂದ್ರ ಮುಖ್ಯಪ್ರಾಣ ಸಹಿತ ಶ್ರೀ ರಾಘವೇಂದ್ರ ಸ್ವಾಮಿಗಳ ಮೃತ್ಹಿಕ ಬೃಂದಾವನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಥಮ ದಿನದ ಕಾರ್ಯಕ್ರಮವನ್ನು ಬ್ರಹ್ಮಶ್ರೀ ವೇದಮೂರ್ತಿ ಕಾರ್ಕಳ ಶ್ರೀ ಭಾರತೀಯ ರಮಣ ಆಚಾರ್ಯರ ಮಾರ್ಗದರ್ಶನದಲ್ಲಿ ಕ್ಷೇತ್ರದ ಪ್ರಧಾನ ಸಂಘ ಅರ್ಚಕರಾದ ವೇದಮೂರ್ತಿ ಕುಂಟಿನೀ ರಾಘವೇಂದ್ರ ಭಾಂಗಿಣ್ಣಾಯರ ನೇತೃತ್ವದಲ್ಲಿ ಎ.20 ರಂದು ನಡೆಯಿತು.

ಶ್ರೀ ರಾಘವೇಂದ್ರ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಬ್ರಹ್ಮಕ ಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಮ್,
ನಾರಾಯಣ ಬೇಗೂರು, ವಿಆರ್ ನಾಯಕ್ ,ಕೃಷ್ಣಪ್ಪ ಪೂಜಾರಿ, ಮಹಾಬಲ ಶೆಟ್ಟಿ , ಸೋಮೇಗೌಡ, ವಸಂತ ಸುವರ್ಣ, ಮುಂತಾದ ಹಿರಿಯರ ಸಮ್ಮುಖದಲ್ಲಿ ದೀಪ ಬೆಳಗಿಸುವ ಮುಖಾಂತರ ಮಹಿಳೆಯರ ಭಜನಾ ಕಮ್ಮಟಗಳ ಒಗ್ಗೂಡುವಿಕೆಯಿಂದ ಪ್ರಾರಂಭವಾಯಿತು.

ಧಾರ್ಮಿಕ ಸಭಾ ಕಾರ್ಯಕ್ರಮ ಅಧ್ಯಕ್ಷತೆಯನ್ನು ರಾಘವೇಂದ್ರ ಸೇವಾ ಪ್ರತಿಷ್ಠಾನದ ಟ್ರಸ್ಟಿ ಉಮಾ ರಾವ್ ವಹಿಸಿದ್ದರು‌. ಜಿ‌ಪಂ ಮಾಜ ಸದಸ್ಯೆ ಲೋಕೇಶ್ವರಿ ವಿನಯ ಚಂದ್ರ ಗೌಡ, ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಸವಿತಾ ಜಯದೇವ್, ಹಿರಿಯರಾದ ಸಂಗೀತ ಹೇರಾಜೆ, ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷೆ ಸುಭಾಷಿಣಿ ಶೆಟ್ಟಿ, ನಿನಾದ ಕ್ಲಾಸಿಕಲ್ ಮುಂಡ್ರುಪ್ಪಾಡಿ ಇದರ ಮುಖ್ಯಸ್ಥೆ ಶ್ರೀದೇವಿ ಸಚಿನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ನಾರಾಯಣ ಬೇಗೂರ್ ರವರು ನೀನಾದ ಕ್ಲಾಸಿಕಲ್ ಮುಂಡ್ರುಪಾಡಿ ಇವರಿಂದ ರಚಿತವಾದ ರಾಘವೇಂದ್ರ ಸ್ವಾಮಿಗಳ ಸ್ತುತಿಯ ಯೂಟ್ಯೂಬನ್ನು ಬಿಡುಗಡೆಗೊಳಿಸಿದರು. ಮೋಕ್ಷ ವಿ ಪೂಜಾರಿ ಕೋಡ್ಲಕ್ಕೆ ಸ್ವಾಗತಿಸಿ ಪ್ರಸ್ತಾವಿಸಿದರು.ಸುಧಾ ಆರ್ ಸಾಲಿಯಾನ್ ಮತ್ತು ಜಯಾನಂದ ಲಾಯಿಲ ನಿರೂಪಿಸಿದರು. ಸೌಮ್ಯ ಲಾಯಿಲ ಸಹಕರಿಸಿದರು. ಸುಶೀಲಾ ಎಸ್ ಹೆಗ್ಡೆ ವಂದಿಸಿದರು.

Related posts

ಮಡಂತ್ಯಾರು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ, ಕಠಿಣ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ, ಪೊಲೀಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ

Suddi Udaya

ಫೆ.3: ಬೆಳ್ತಂಗಡಿ ವಕೀಲರು ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಿಶೇಷ ತರಗತಿಯ ಸಮಾರೋಪ ಕಾರ್ಯಕ್ರಮ

Suddi Udaya

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya
error: Content is protected !!