23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾಲಾಡಿ: ಕೊಲ್ಪೆದಬೈಲುನಲ್ಲಿ ಹಾಡಹಾಗಲೇ ಮನೆಗೆ ನುಗ್ಗಿದ್ದ ಕಳ್ಳರು: ಚಿನ್ನಾಭರಣ ಸೇರಿ ನಗದು ಕಳವು

ಮಾಲಾಡಿ : ಇಲ್ಲಿಯ ಕೊಲ್ಪೆದಬೈಲು ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಾಡಹಾಗಲೇ ಕಳ್ಳರು ಮನೆಗೆ ನುಗ್ಗಿ ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ರೂ 30,000/- ವನ್ನು ಕಳವು ಗೈದಿರುವ ಘಟನೆ ಎ.20 ರಂದು ನಡೆದಿದೆ.

ಘಟನೆ ವಿವರ: ಮಾಲಾಡಿ ಕೊಲ್ಪೆದಬೈಲು ನಿವಾಸಿ ಶ್ರೀಮತಿ ವಸಂತಿ ಹೆಗ್ಡೆ ಎಂಬವರ ದೂರಿನಂತೆ ವಸಂತಿ ಹೆಗ್ಡೆ, ಅವರ ಮಗ ಹಾಗೂ ಸೊಸೆ ಎ.20 ರಂದು ಬೆಳ್ತಂಗಡಿಗೆ ತೆರಳಿದ್ದು ಸಂಜೆ ವಾಪಾಸು ಮನೆಗೆ ಬಂದು ನೋಡಿದಾಗ, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ವಸಂತಿ ಹೆಗ್ಡೆರವರ ಮನೆಯ ಮುಂದಿನ ಬಾಗಿಲಿಗೆ ಹಾಕಿರುವ ಬೀಗದ ಕೊಂಡಿಯನ್ನು ಮುರಿದು ಮನೆಯೊಳಗೆ ಪ್ರವೇಶಿಸಿ ವಸಂತಿ ಹೆಗ್ಡೆ ರವರ ಕೋಣೆಯ ಕಪಾಟುಗಳಲ್ಲಿದ್ದ ಚಿನ್ನಾಭರಣಗಳನ್ನು ಹಾಗೂ ನಗದು ರೂ 30,000/- ಹಣವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಚಿನ್ನಾಭರಣಗಳ ಒಟ್ಟು ತೂಕ 160.5 ಗ್ರಾಂ ಆಗಿದ್ದು ಇದರ ಮೌಲ್ಯ ರೂ 13,72,000/- ಆಗಿರುತ್ತದೆ. ನಗದು ಸೇರಿ ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ ರೂ 14,02,000/- ಆಗಿರುತ್ತದೆ.

ಈ ಬಗ್ಗೆ ಪುಂಜಾಲಕಟ್ಟೆ ಠಾಣಾ ಅ.ಕ್ರ 25/2025 ಕಲಂ: 331(3), 305 BNS- 2023 ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಉಜಿರೆ: ಶ್ರೀ ಧ.ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ವ್ಯಾಪಾರ ಮೇಳ

Suddi Udaya

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

Suddi Udaya

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

Suddi Udaya

ಕಳಿಯ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿಯ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಿಸಿದ ಪ್ರಕರಣ: ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ: ತಹಶೀಲ್ದಾರರಿಗೆ ಹಾಗೂ ಪೋಲಿಸ್ ಠಾಣೆಗೆ ದೂರು

Suddi Udaya

ಕರಾಟೆ ಚಾಂಪಿಯನ್ಶಿಪ್: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕ

Suddi Udaya
error: Content is protected !!