24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾಲಾಡಿ: ಕೊಲ್ಪೆದಬೈಲುನಲ್ಲಿ ಹಾಡಹಾಗಲೇ ಮನೆಗೆ ನುಗ್ಗಿದ್ದ ಕಳ್ಳರು: ಚಿನ್ನಾಭರಣ ಸೇರಿ ನಗದು ಕಳವು

ಮಾಲಾಡಿ : ಇಲ್ಲಿಯ ಕೊಲ್ಪೆದಬೈಲು ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಾಡಹಾಗಲೇ ಕಳ್ಳರು ಮನೆಗೆ ನುಗ್ಗಿ ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ರೂ 30,000/- ವನ್ನು ಕಳವು ಗೈದಿರುವ ಘಟನೆ ಎ.20 ರಂದು ನಡೆದಿದೆ.

ಘಟನೆ ವಿವರ: ಮಾಲಾಡಿ ಕೊಲ್ಪೆದಬೈಲು ನಿವಾಸಿ ಶ್ರೀಮತಿ ವಸಂತಿ ಹೆಗ್ಡೆ ಎಂಬವರ ದೂರಿನಂತೆ ವಸಂತಿ ಹೆಗ್ಡೆ, ಅವರ ಮಗ ಹಾಗೂ ಸೊಸೆ ಎ.20 ರಂದು ಬೆಳ್ತಂಗಡಿಗೆ ತೆರಳಿದ್ದು ಸಂಜೆ ವಾಪಾಸು ಮನೆಗೆ ಬಂದು ನೋಡಿದಾಗ, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ವಸಂತಿ ಹೆಗ್ಡೆರವರ ಮನೆಯ ಮುಂದಿನ ಬಾಗಿಲಿಗೆ ಹಾಕಿರುವ ಬೀಗದ ಕೊಂಡಿಯನ್ನು ಮುರಿದು ಮನೆಯೊಳಗೆ ಪ್ರವೇಶಿಸಿ ವಸಂತಿ ಹೆಗ್ಡೆ ರವರ ಕೋಣೆಯ ಕಪಾಟುಗಳಲ್ಲಿದ್ದ ಚಿನ್ನಾಭರಣಗಳನ್ನು ಹಾಗೂ ನಗದು ರೂ 30,000/- ಹಣವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಚಿನ್ನಾಭರಣಗಳ ಒಟ್ಟು ತೂಕ 160.5 ಗ್ರಾಂ ಆಗಿದ್ದು ಇದರ ಮೌಲ್ಯ ರೂ 13,72,000/- ಆಗಿರುತ್ತದೆ. ನಗದು ಸೇರಿ ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ ರೂ 14,02,000/- ಆಗಿರುತ್ತದೆ.

ಈ ಬಗ್ಗೆ ಪುಂಜಾಲಕಟ್ಟೆ ಠಾಣಾ ಅ.ಕ್ರ 25/2025 ಕಲಂ: 331(3), 305 BNS- 2023 ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಚಾರ್ಮಾಡಿಯಲ್ಲಿ ಬಿರುಸಿನ ಮತದಾನ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಜನೋಪಯೋಗಿ ಪ್ರಾಜೆಕ್ಟ್‌ಗಳಿಗೆ ಪ್ರಶಸ್ತಿ: ಪ್ರಾಂಶುಪಾಲ ಸಂತೋಷ್ ರವರಿಂದ ಪತ್ರಿಕಾಗೋಷ್ಠಿ

Suddi Udaya

ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆ

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಡ್ಡಂದಡ್ಕ – ಕಟ್ಟೆ ರಸ್ತೆಗೆ ಗುಣಪಾಲ್ ಜೈನ್ ರಸ್ತೆ ಎಂದು ನಾಮಕರಣ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ರವರಿಂದ ಅನಾವರಣ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ: ಶಾಸಕ ಹರೀಶ್ ಪೂಂಜ: ಮಾಜಿ ಶಾಸಕ ವಸಂತ ಬಂಗೇರ ನಡೆ ವಿರುದ್ಧ ಹಾಲಿ ಶಾಸಕರ ಕ್ರಮ ಎಚ್ಚರಿಕೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭ ಹಕ್ಕುಚ್ಯುತಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ

Suddi Udaya
error: Content is protected !!