26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾಲಾಡಿ: ಕೊಲ್ಪೆದಬೈಲುನಲ್ಲಿ ಹಾಡಹಾಗಲೇ ಮನೆಗೆ ನುಗ್ಗಿದ್ದ ಕಳ್ಳರು: ಚಿನ್ನಾಭರಣ ಸೇರಿ ನಗದು ಕಳವು

ಮಾಲಾಡಿ : ಇಲ್ಲಿಯ ಕೊಲ್ಪೆದಬೈಲು ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಾಡಹಾಗಲೇ ಕಳ್ಳರು ಮನೆಗೆ ನುಗ್ಗಿ ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ರೂ 30,000/- ವನ್ನು ಕಳವು ಗೈದಿರುವ ಘಟನೆ ಎ.20 ರಂದು ನಡೆದಿದೆ.

ಘಟನೆ ವಿವರ: ಮಾಲಾಡಿ ಕೊಲ್ಪೆದಬೈಲು ನಿವಾಸಿ ಶ್ರೀಮತಿ ವಸಂತಿ ಹೆಗ್ಡೆ ಎಂಬವರ ದೂರಿನಂತೆ ವಸಂತಿ ಹೆಗ್ಡೆ, ಅವರ ಮಗ ಹಾಗೂ ಸೊಸೆ ಎ.20 ರಂದು ಬೆಳ್ತಂಗಡಿಗೆ ತೆರಳಿದ್ದು ಸಂಜೆ ವಾಪಾಸು ಮನೆಗೆ ಬಂದು ನೋಡಿದಾಗ, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ವಸಂತಿ ಹೆಗ್ಡೆರವರ ಮನೆಯ ಮುಂದಿನ ಬಾಗಿಲಿಗೆ ಹಾಕಿರುವ ಬೀಗದ ಕೊಂಡಿಯನ್ನು ಮುರಿದು ಮನೆಯೊಳಗೆ ಪ್ರವೇಶಿಸಿ ವಸಂತಿ ಹೆಗ್ಡೆ ರವರ ಕೋಣೆಯ ಕಪಾಟುಗಳಲ್ಲಿದ್ದ ಚಿನ್ನಾಭರಣಗಳನ್ನು ಹಾಗೂ ನಗದು ರೂ 30,000/- ಹಣವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಚಿನ್ನಾಭರಣಗಳ ಒಟ್ಟು ತೂಕ 160.5 ಗ್ರಾಂ ಆಗಿದ್ದು ಇದರ ಮೌಲ್ಯ ರೂ 13,72,000/- ಆಗಿರುತ್ತದೆ. ನಗದು ಸೇರಿ ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ ರೂ 14,02,000/- ಆಗಿರುತ್ತದೆ.

ಈ ಬಗ್ಗೆ ಪುಂಜಾಲಕಟ್ಟೆ ಠಾಣಾ ಅ.ಕ್ರ 25/2025 ಕಲಂ: 331(3), 305 BNS- 2023 ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಗಾಳಿ ಮಳೆ; ಕೊಯ್ಯೂರು ಜಿನ್ನಪ್ಪ ಗೌಡರ ಮನೆಗೆ ಬಿದ್ದ ತೆಂಗಿನಮರ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆ-ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹೇಳಿಕೆಗಳ ಪ್ರಚಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

Suddi Udaya

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಬಳಂಜ: ಸನಾತನ ಸಂಸ್ಥೆಯಿಂದ ವಿಶೇಷ ಪ್ರವಚನ

Suddi Udaya

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya
error: Content is protected !!