September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಮಕ್ಕಳ ವಸಂತ ಚೈತನ್ಯ ಶಿಬಿರದ ಸಮಾರೋಪ ಸಮಾರಂಭ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಕರ್ನಾಟಕ ನೇತ್ರಾವತಿ ವಲಯ ಮಂಗಳೂರು ಕಳಿಯ ಶಾಖೆಯ ವತಿಯಿಂದ ಕ್ಷೀರಸಂಗಮ ಸಭಾಭವನದಲ್ಲಿ ಜರಗಿದ 15 ದಿನಗಳ ಮಕ್ಕಳ ವಸಂತ ಚೈತನ್ಯ ಶಿಬಿರದ ಸಮಾರೋಪವು ಭಾರತ ಮಾತಾ ಪೂಜನದೊಂದಿಗೆ ಜರಗಿತು.

ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾರ್ಥಿ ತನ್ಮಯಕೃಷ್ಣ ವಹಿಸಿದ್ದರು. ಮುಖ್ಯ ಮಾತುಗಾರರಾಗಿದ್ದ ಯೋಗ ಬಂಧು ತುಕಾರಾಮ ಶಿಬಿರದಲ್ಲಿ ಪಡೆದ ಅನುಭವಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು. ವಿದ್ಯಾರ್ಥಿಗಳಾದ ಆದ್ಯವಿ, ಸನ್ನಿಧಿ, ಅರ್ಜುನ ಮತ್ತು ಪೋಷಕರಾದ ಮಾಜಿ ಯೋಧ ವಿಕ್ರಮ, ಶಿಕ್ಷಕಿ ವಿದ್ಯಾ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಆರಂಭದಲ್ಲಿ ವಿದ್ಯಾರ್ಥಿಗಳು, ಪೋಷಕರು, ಯೋಗ ಬಂಧುಗಳು ಅಗ್ನಿಹೋತ್ರ ಮತ್ತು ಭಾರತ ಮಾತಾ ಪೂಜನ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕೇಂದ್ರದ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್ ಮಾಹಿತಿ ನೀಡಿದರು. ಶಿಬಿರಾರ್ಥಿಗಳಿಗೆ ಭಗವದ್ಗೀತೆಯ ಪುಸ್ತಕಗಳನ್ನು ವಿತರಿಸಲಾಯಿತು.

ಮುಖ್ಯ ಶಿಕ್ಷಕರೊಂದಿಗೆ ಕೇಂದ್ರದ ಸಹ ಶಿಕ್ಷಕ ಸುಕೇಶ್, ಶಿಬಿರದ ಶಿಕ್ಷಕರಾದ ಸತೀಶ್ ಮತ್ತು ನಿತಿನ್, ಯೋಗಬಂಧು ದಿವಾಕರ ಆಚಾರ್ಯ ಗೇರುಕಟ್ಟೆ, ಭಾರತಿ ಶಿಬಿರದ ದೈನಂದಿನ ಚಟುವಟಿಕೆಗಳನ್ನು ನಡೆಸಿಕೊಡುತ್ತಿದ್ದರು. ಕಾರ್ಯಕ್ರಮದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಗೌಡ, ಕಳಿಯ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರಾದ ಸುಭಾಷಿಣಿ, ಕೇಶವ, ಸುಧಾಕರ ಮಜಲು, ರಾಜೇಶ್, ಅಶೋಕ ಆಚಾರ್ಯ, ವಸಂತ ಆಚಾರ್ಯ, ಗಣೇಶ್ ಮೊದಲಾದವರು ಉಪಸ್ಥಿತರಿದ್ದರು.

ಶಾಖೆಯ ಸಂಚಾಲಕ ವಿಜಯ ಕಲಾಯಿದೊಟ್ಟು, ವರದಿ ಪ್ರಮುಖ ಕೇಶವ ಪೂಜಾರಿ, ಗಣೇಶ, ಶುಭ ಮಂಗಳ, ಮೀರಾ, ವಿಶ್ರುತ, ಕಾವ್ಯ ಮತ್ತು ಎಲ್ಲಾ ಯೋಗ ಬಂಧುಗಳು ಶಿಬಿರದ ಯಶಸ್ಸಿಗೆ ಸಹಕರಿಸಿದ್ದರು. ಪ್ರಣಮ್ಮ ಪ್ರಾರ್ಥಿಸಿ, ಅವಿನ್ನು ಸ್ವಾಗತಿಸಿದರು. ಸನ್ನಿಧಿ ಶಿಬಿರದ ವರದಿ ವಾಚಿಸಿದರು. ಆಕರ್ಷ ಕಾರ್ಯಕ್ರಮ ನಿರೂಪಿಸಿದರು. ಪ್ರಸಾದ ವಿತರಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು. ಅದ್ವಿತ್ ವಂದಿಸಿದರು.

Related posts

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya

ವೇಣೂರು ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ಗದ್ದುಗೆಗೆ: ಆಡಳಿತ ಮಂಡಳಿಯನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಎಸ್.ಐ.ಟಿ ತಂಡ ಬೆಳ್ತಂಗಡಿ ಕಚೇರಿಗೆ ಆಗಮನ: ಇಂದು ತಲೆಬುರುಡೆ ತೆಗೆದ ಸ್ಥಳ ಮಹಜರು ಸಾಧ್ಯತೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya

ಸುಲ್ಕೇರಿಮೊಗ್ರು ನಿವಾಸಿ ಬಾಲಮ್ಮ ನಿಧನ

Suddi Udaya
error: Content is protected !!