September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕಿನಿಂದ ಹೊರೆ ಕಾಣಿಕೆ; ಸಮಾಲೋಚನ ಸಭೆ

ಬೆಳ್ತಂಗಡಿ: ಎ.25 ರಿಂದ ಮೇ 3 ರವರೆಗೆ ತೆಕ್ಕಾರು ಗ್ರಾಮದಲ್ಲಿರುವ ಶ್ರೀ ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕು ಮಟ್ಟದಿಂದ ಹೊರ ಕಾಣಿಕೆ ಸಮರ್ಪಿಸುವ ಬಗ್ಗೆ ಸಮಾಲೋಚನ ಸಭೆಯನ್ನು ನಡೆಸಲಾಯಿತು.

ಈ ವೇಳೆ ತಾಲೂಕಿನ ಪ್ರತಿ ಗ್ರಾಮದಿಂದ ಹೊರೆ ಕಾಣಿಕೆ ತೆಗೆದುಕೊಂಡು ಬರುವುವಂತೆ ವಿನಂತಿಸಲಾಯಿತು. ಎ.27 ರಂದು ಬೆಳಿಗ್ಗೆ ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನ ಹಾಗೂ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಿಂದ ಏಕಕಾಲದಲ್ಲಿ ಹೊರೆ ಕಾಣಿಕೆ ಉದ್ಘಾಟನೆಗೊಳ್ಳಲಿದ್ದು ಪ್ರತಿ ಗ್ರಾಮದ ಭಕ್ತರು ಹೊರೆಕಾಣಿಕೆ ಸಮರ್ಪಿಸಬೇಕೆಂದು ಹಾಗೂ ಎ. 30 ರಂದು ಪ್ರತಿಷ್ಠಾ ದಿವಸದಂದು ತಾಲೂಕಿನ ಎಲ್ಲಾ ಹಿಂದೂ ಬಂಧುಗಳು ಬೃಹತ್ ಸಂಖ್ಯೆಯಲ್ಲಿ ಬರಬೇಕೆಂದು ವಿನಂತಿಸಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಶಶಿಧರ್ ಶೆಟ್ಟಿ ಬರೋಡ, ಕಾರ್ಯಾಧ್ಯಕ್ಷ ಲಕ್ಷ್ಮಣ್, ಪ್ರಧಾನ ಸಂಚಾಲಕ ಹರೀಶ್ ಪೂಂಜ ಹಾಗೂ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಹಾಗೂ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಕಾರ್ಯದರ್ಶಿ ನವೀನ್ ನೆರಿಯ ಹಾಗೂ ತಾಲೂಕಿನ ಎಲ್ಲಾ ಧಾರ್ಮಿಕ ಮುಖಂಡರುಗಳು ಉಪಸ್ಥಿತರಿದ್ದರು.

Related posts

ಸೌಜನ್ಯಾ ಕೊಲೆ ಪ್ರಕರಣ: ವಿವರವಾದ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಲ. ನಿತ್ಯಾನಂದ ನಾವರ ನೇಮಕ

Suddi Udaya

ಧರ್ಮಸ್ಥಳ: ಪಾದಾಚಾರಿಗೆ ಡಿಕ್ಕಿ ಹೊಡೆದ ಕೆ.ಎಸ್.ಆರ್.ಟಿ.ಸಿ ಬಸ್

Suddi Udaya

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya

ವೇಣೂರು ಪೋಲಿಸ್ ಠಾಣೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!