25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕಿನಿಂದ ಹೊರೆ ಕಾಣಿಕೆ; ಸಮಾಲೋಚನ ಸಭೆ

ಬೆಳ್ತಂಗಡಿ: ಎ.25 ರಿಂದ ಮೇ 3 ರವರೆಗೆ ತೆಕ್ಕಾರು ಗ್ರಾಮದಲ್ಲಿರುವ ಶ್ರೀ ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕು ಮಟ್ಟದಿಂದ ಹೊರ ಕಾಣಿಕೆ ಸಮರ್ಪಿಸುವ ಬಗ್ಗೆ ಸಮಾಲೋಚನ ಸಭೆಯನ್ನು ನಡೆಸಲಾಯಿತು.

ಈ ವೇಳೆ ತಾಲೂಕಿನ ಪ್ರತಿ ಗ್ರಾಮದಿಂದ ಹೊರೆ ಕಾಣಿಕೆ ತೆಗೆದುಕೊಂಡು ಬರುವುವಂತೆ ವಿನಂತಿಸಲಾಯಿತು. ಎ.27 ರಂದು ಬೆಳಿಗ್ಗೆ ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನ ಹಾಗೂ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಿಂದ ಏಕಕಾಲದಲ್ಲಿ ಹೊರೆ ಕಾಣಿಕೆ ಉದ್ಘಾಟನೆಗೊಳ್ಳಲಿದ್ದು ಪ್ರತಿ ಗ್ರಾಮದ ಭಕ್ತರು ಹೊರೆಕಾಣಿಕೆ ಸಮರ್ಪಿಸಬೇಕೆಂದು ಹಾಗೂ ಎ. 30 ರಂದು ಪ್ರತಿಷ್ಠಾ ದಿವಸದಂದು ತಾಲೂಕಿನ ಎಲ್ಲಾ ಹಿಂದೂ ಬಂಧುಗಳು ಬೃಹತ್ ಸಂಖ್ಯೆಯಲ್ಲಿ ಬರಬೇಕೆಂದು ವಿನಂತಿಸಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಶಶಿಧರ್ ಶೆಟ್ಟಿ ಬರೋಡ, ಕಾರ್ಯಾಧ್ಯಕ್ಷ ಲಕ್ಷ್ಮಣ್, ಪ್ರಧಾನ ಸಂಚಾಲಕ ಹರೀಶ್ ಪೂಂಜ ಹಾಗೂ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಹಾಗೂ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಕಾರ್ಯದರ್ಶಿ ನವೀನ್ ನೆರಿಯ ಹಾಗೂ ತಾಲೂಕಿನ ಎಲ್ಲಾ ಧಾರ್ಮಿಕ ಮುಖಂಡರುಗಳು ಉಪಸ್ಥಿತರಿದ್ದರು.

Related posts

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

Suddi Udaya

‍ಮುಂಡಾಜೆ: ಇಂದುಮತಿ ಫಡಕೆ ನಿಧನ

Suddi Udaya

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

Suddi Udaya

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

Suddi Udaya

ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಮೂಡುಬಿದಿರೆಗೆ ರಾಜ್ಯ ಮಟ್ಟದಲ್ಲಿ ಎರಡನೇ ಮತ್ತು ನಾಲ್ಕನೇ ರ‍್ಯಾಂಕ್‌ಗಳು

Suddi Udaya
error: Content is protected !!