23.8 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ತೀವ್ರ ಸಂತಾಪ, 9 ದಿನಗಳ ಶೋಕಾಚರಣೆ

ಬೆಳ್ತಂಗಡಿ: ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ಬೆಳ್ತಂಗಡಿ ಧರ್ಮಪ್ರಾಂತ್ಯವು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಪೋಪ್ ನಿಧನದಲ್ಲಿ 9 ದಿನಗಳ ಶೋಕಾಚರಣೆಯನ್ನು ಘೋಷಿಸಿದ್ದು, ಧರ್ಮಪ್ರಾಂತ್ಯಕ್ಕೆ ಸಂಬಂಧಪಟ್ಟ ಎಲ್ಲಾ ಹಬ್ಬ ಆಚರಣೆಗಳನ್ನು ಸರಳವಾಗಿ ನಡೆಸಲೆಂದು ಘೋಷಿಸಲಾಗಿದೆ.

ಇಂದು ಬೆಳಿಗ್ಗೆ ಬೆಳ್ತಂಗಡಿ, ಸಂತ ಲಾರೆನ್ಸರ ಕ್ಯಾಥಿಡ್ರಲ್ ದೇವಾಲಯದಲ್ಲಿ ಧರ್ಮಾಧ್ಯಕ್ಷ ಪರಮ ಪೂಜ್ಯ ಲಾರೆನ್ಸ್ ರವರು ವಿಶೇಷ ಪೂಜೆ ಸಲ್ಲಿಸಿ ಪೋಪ್ ರಿಗಾಗಿ ಪ್ರಾರ್ಥನೆ ಮಾಡಿದರು. ಧರ್ಮಕ್ಷೇತ್ರದ ಬಿಷಪ್ ಹೌಸ್ ಮತ್ತು ಪಾಲನಾ ಕೇಂದ್ರದ ಎಲ್ಲ ಧರ್ಮಗುರುಗಳು, ಕನ್ಯಾಸ್ತ್ರೀಯರು ಹಾಗು ವಿಶ್ವಾಸಿಗಳು ಹಾಜರಿದ್ದರು.

ವಿಶೇಷ ಪೂಜೆಯ ಸಂದೇಶದ ಸಮಯದಲ್ಲಿ ಪರಮ ಪೂಜ್ಯರು ಪೋಪೆರನ್ನು ಭೇಟಿಮಾಡಿದ ಸವಿನೆನಪುಗಳನ್ನು ಹಂಚಿಕ್ಕೊಳ್ಳುತ್ತಾ, “ಪೋಪರಿಗೆ ಭಾರತದ ಕ್ರಿಶ್ಚಿಯನ್ನರ ಕುರಿತು ವಿಶೇಷ ಕಾಳಜಿ ಇತ್ತು, ಅದರಲ್ಲೂ ಬೆಳ್ತಂಗಡಿ ಧರ್ಮಕ್ಷೇತ್ರದ ಎಲ್ಲಾ ಚಟುವಟಿಕೆಗಳ ಕುರಿತು ಕೇಳಿತಿಳಿಯುತ್ತಿದ್ದರು” ಎಂದು ನುಡಿದರು. ಪೋಪ್ ಫ್ರಾನ್ಸಿಸ್ ರವ ಅಸಾನಿಧ್ಯವು ಧರ್ಮಸಭೆಯಲ್ಲೂ ಇಡೀ ಜಗತ್ತಿನಲ್ಲೂ ತುಂಬಲಾಗದ ನಷ್ಟಭರಿಸಲಾಗಿದೆ. ಪೋಪ್ ಫ್ರಾನ್ಸಿಸ್ ರವರ ಶಾಂತಿಯ ಮತ್ತು ಕರುಣೆಯ ಸಂದೇಶವು ಜಗಕೆ ಸಮಾಧಾನವನ್ನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಪರಮ ಪೂಜ್ಯ ಲಾರೆನ್ಸರವರು ಸಂತಾಪ ಸೂಚಿಸಿದರು.

Related posts

ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

Suddi Udaya

ವಿದ್ಯುತ್ ತಂತಿ ಮೇಲೆ ಬಿದ್ದ ಮರದ ಗೆಲ್ಲು: ಶಾಕ್ ತಗಲಿ ಕಾರ್ಮಿಕ ಚನನ ಗೌಡ ಮೃತ್ಯು

Suddi Udaya

ಬೆಳ್ತಂಗಡಿ: ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜು ಮೂಡಬಿದ್ರಿ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ಜಿಲ್ಲೆಗೆ ಪ್ರಥಮ

Suddi Udaya

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

Suddi Udaya
error: Content is protected !!