July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ತೀವ್ರ ಸಂತಾಪ, 9 ದಿನಗಳ ಶೋಕಾಚರಣೆ

ಬೆಳ್ತಂಗಡಿ: ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ಬೆಳ್ತಂಗಡಿ ಧರ್ಮಪ್ರಾಂತ್ಯವು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಪೋಪ್ ನಿಧನದಲ್ಲಿ 9 ದಿನಗಳ ಶೋಕಾಚರಣೆಯನ್ನು ಘೋಷಿಸಿದ್ದು, ಧರ್ಮಪ್ರಾಂತ್ಯಕ್ಕೆ ಸಂಬಂಧಪಟ್ಟ ಎಲ್ಲಾ ಹಬ್ಬ ಆಚರಣೆಗಳನ್ನು ಸರಳವಾಗಿ ನಡೆಸಲೆಂದು ಘೋಷಿಸಲಾಗಿದೆ.

ಇಂದು ಬೆಳಿಗ್ಗೆ ಬೆಳ್ತಂಗಡಿ, ಸಂತ ಲಾರೆನ್ಸರ ಕ್ಯಾಥಿಡ್ರಲ್ ದೇವಾಲಯದಲ್ಲಿ ಧರ್ಮಾಧ್ಯಕ್ಷ ಪರಮ ಪೂಜ್ಯ ಲಾರೆನ್ಸ್ ರವರು ವಿಶೇಷ ಪೂಜೆ ಸಲ್ಲಿಸಿ ಪೋಪ್ ರಿಗಾಗಿ ಪ್ರಾರ್ಥನೆ ಮಾಡಿದರು. ಧರ್ಮಕ್ಷೇತ್ರದ ಬಿಷಪ್ ಹೌಸ್ ಮತ್ತು ಪಾಲನಾ ಕೇಂದ್ರದ ಎಲ್ಲ ಧರ್ಮಗುರುಗಳು, ಕನ್ಯಾಸ್ತ್ರೀಯರು ಹಾಗು ವಿಶ್ವಾಸಿಗಳು ಹಾಜರಿದ್ದರು.

ವಿಶೇಷ ಪೂಜೆಯ ಸಂದೇಶದ ಸಮಯದಲ್ಲಿ ಪರಮ ಪೂಜ್ಯರು ಪೋಪೆರನ್ನು ಭೇಟಿಮಾಡಿದ ಸವಿನೆನಪುಗಳನ್ನು ಹಂಚಿಕ್ಕೊಳ್ಳುತ್ತಾ, “ಪೋಪರಿಗೆ ಭಾರತದ ಕ್ರಿಶ್ಚಿಯನ್ನರ ಕುರಿತು ವಿಶೇಷ ಕಾಳಜಿ ಇತ್ತು, ಅದರಲ್ಲೂ ಬೆಳ್ತಂಗಡಿ ಧರ್ಮಕ್ಷೇತ್ರದ ಎಲ್ಲಾ ಚಟುವಟಿಕೆಗಳ ಕುರಿತು ಕೇಳಿತಿಳಿಯುತ್ತಿದ್ದರು” ಎಂದು ನುಡಿದರು. ಪೋಪ್ ಫ್ರಾನ್ಸಿಸ್ ರವ ಅಸಾನಿಧ್ಯವು ಧರ್ಮಸಭೆಯಲ್ಲೂ ಇಡೀ ಜಗತ್ತಿನಲ್ಲೂ ತುಂಬಲಾಗದ ನಷ್ಟಭರಿಸಲಾಗಿದೆ. ಪೋಪ್ ಫ್ರಾನ್ಸಿಸ್ ರವರ ಶಾಂತಿಯ ಮತ್ತು ಕರುಣೆಯ ಸಂದೇಶವು ಜಗಕೆ ಸಮಾಧಾನವನ್ನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಪರಮ ಪೂಜ್ಯ ಲಾರೆನ್ಸರವರು ಸಂತಾಪ ಸೂಚಿಸಿದರು.

Related posts

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ನಾಳೆ(ಜು.15): ಮುಂಡಾಜೆ ಗ್ರಾಪಂನಲ್ಲಿ ಕೃಷಿ ಮಾಹಿತಿ ಕಾರ್ಯಾಗಾರ

Suddi Udaya

ಅಗಳಿ ಪರಿಸರದಲ್ಲಿ ಚಿರತೆ ಓಡಾಟ

Suddi Udaya

ಮುಂಡಾಜೆ ತಡೆಗೋಡೆಗೆ ಕಾರು ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು

Suddi Udaya

ನಡ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಮಚ್ಚಿನ ಪ್ರಾಥಮಿಕ ಶಾಲೆ ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ಶಾಲಾ ಅಭಿವೃದ್ಧಿ ಸಮಿತಿಯಿಂದ ರಕ್ಷಿತ್ ಶಿವರಾಂ ರಿಗೆ ಅಭಿನಂದನೆ ಸಲ್ಲಿಕೆ

Suddi Udaya
error: Content is protected !!