23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೆ ಆಗ್ರಹ

ತೆಕ್ಕಾರು: ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೊಳಿಸಲು ತೆಕ್ಕಾರು ಗ್ರಾಮ ಪಂಚಾಯತ್ ಸದಸ್ಯರು ಆಗ್ರಹಿಸಿದ್ದಾರೆ.

ಹಲವು ವರ್ಷಗಳಿಂದ ಈ ರಸ್ತೆಗಳ ಅಭಿವೃದ್ಧಿಗೆ ಬೇಡಿಕೆ ನೀಡುತ್ತಾ ಬಂದಿದ್ದು ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ತೆಕ್ಕಾರು ಗ್ರಾಮದಲ್ಲಿ ನೂರಾರು ವರ್ಷದ ಹಿಂದಿನ ದೇವಾಲಯ ಪುನರುತ್ಥಾನಗೊಂಡು ಉತ್ಸವಕ್ಕೆ ತಯಾರಿಯಾಗಿದೆ. ಗೋಪಾಲಕೃಷ್ಣ ದೇವರ ಬ್ರಹ್ಮಕಲಶದ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುವ ನೀರಿಕ್ಷೆಯಿದೆ. ಈ ಎಲ್ಲಾ ಅಂಶಗಳನ್ನು ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆಗೆ ಗಮನಹರಿಸಬೇಕು. ಬಾಜಾರು-ಜೋಡುಕಟ್ಟೆ 750 ಮೀಟರ್, ಕೊಡಿಬೆಟ್ಟು-ದೇವರಗುಡ್ಡೆ 350 ಮೀ., ದೇವರಗುಡ್ಡೆ-ತೆಕ್ಕಾರು ಸುಮಾರು 2 ಕೀ.ಮೀ. ಉದ್ದದ ರಸ್ತೆಗೆ ಪಿಎಂಜಿ ಯೋಜನೆ ಮೂಲಕ ಡಾಮರೀಕರಣ ಮಾಡಬೇಕು. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯವಿಲ್ಲ, ಶೀಘ್ರವಾಗಿ ರಸ್ತೆ ಅಭಿವೃದ್ಧಿಗೊಳಿಸಬೇಕು ಎಂದು ಸದಸ್ಯರು ಆಗ್ರಹಿಸಿದ್ದಾರೆ.

Related posts

ಇಂದು(ಎ.30): ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ರಘುಪತಿ ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೌತಡ್ಕದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ

Suddi Udaya

ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : 75 ಕೆ.ಜಿ ವಿಭಾಗದಲ್ಲಿ ಹೇಮಚಂದ್ರರಿಗೆ ಕಂಚಿನ‌ ಪದಕ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!