September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

ಬೆಳ್ತಂಗಡಿ: ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಹಣದ ವಿಚಾರದಲ್ಲಿ ಯುವಕರ ವಿರುದ್ದ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದ ಆರೋಪಿಗಳಿಗೆ ಕರ್ನಾಟಕ ಹೈ ಕೋರ್ಟ್ ಜಾಮೀನು ನೀಡಿದೆ.ಘಟನೆ ಆಧರಿಸಿ ಬೆಳ್ತಂಗಡಿ ಪೋಲಿಸರು ಮೂವರು ಆರೋಪಿಗಳ ವಿರುದ್ದ ಭಾರತೀಯ ನ್ಯಾಯ ಸಂಹಿತೆ, ಕಲಂ 109,351(2) ಜೊತೆ 3(5) ಕೊಲೆಯತ್ನ ಪ್ರಕರಣ ದಾಖಲಿಸಿದ್ದರು.

ಇದೀಗ ಮೊದಲ ಆರೋಪಿ, ನ್ಯಾಯಾಂಗ ಬಂಧನದಲ್ಲಿರುವ ಹಮೀದ್ ಎಂಬವರಿಗೆ ನಿಯಮಿತ ಜಾಮೀನು ಮತ್ತು ಎರಡನೇ ಆರೋಪಿ ರಿಯಾಝ್ ಮತ್ತು ಮೂರನೇ ಆರೋಪಿ ಅರ್ಷಾದ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.ಸದ್ರಿ ಪ್ರಕರಣ ಕಳೆದ ಫೆಬ್ರವರಿ 5 ರಂದು ಮಾಚಾರಿನಲ್ಲಿ ನಡೆದಿತ್ತು. ಈ ಪ್ರಕರಣದಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಇನ್ನೋರ್ವ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುತ್ತಾನೆ.

ಎ.21ರಂದು ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಇದ್ದ ಪೀಠವು ಈ ಜಾಮೀನು ಮಂಜೂರು ಮಾಡಿತು.ಆರೋಪಿಗಳ ಪರ ಹೈಕೋರ್ಟ್ ವಕೀಲರುಗಳಾದ ಮುಸ್ತಫಾ ಬೆಳ್ತಂಗಡಿ, ಅನ್ವರ್ ಕೆ.ಪಿ ಕುಪ್ಪೆಟ್ಟಿ ಮತ್ತು ಮೋನಿಸ್ ಸಾಹುಕರ್ ವಾದವನ್ನು ಮಂಡಿಸಿದ್ದಾರೆ.

Related posts

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಏಕಾಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ : ಎಸ್.ಐ.ಟಿ ಯಿಂದ ದೂರುದಾರನ ಬಂಧನ, ಆರೋಗ್ಯ ತಪಾಸಣೆ ಬಳಿಕ ನ್ಯಾಯಾಲಯಕ್ಕೆ ಹಾಜರು

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಹೆಣ್ಣು ಮಕ್ಕಳ ಆರೋಗ್ಯ ಮತ್ತು ಎಚ್.ಐ.ವಿ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!