July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

ಬೆಳ್ತಂಗಡಿ: ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಹಣದ ವಿಚಾರದಲ್ಲಿ ಯುವಕರ ವಿರುದ್ದ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದ ಆರೋಪಿಗಳಿಗೆ ಕರ್ನಾಟಕ ಹೈ ಕೋರ್ಟ್ ಜಾಮೀನು ನೀಡಿದೆ.ಘಟನೆ ಆಧರಿಸಿ ಬೆಳ್ತಂಗಡಿ ಪೋಲಿಸರು ಮೂವರು ಆರೋಪಿಗಳ ವಿರುದ್ದ ಭಾರತೀಯ ನ್ಯಾಯ ಸಂಹಿತೆ, ಕಲಂ 109,351(2) ಜೊತೆ 3(5) ಕೊಲೆಯತ್ನ ಪ್ರಕರಣ ದಾಖಲಿಸಿದ್ದರು.

ಇದೀಗ ಮೊದಲ ಆರೋಪಿ, ನ್ಯಾಯಾಂಗ ಬಂಧನದಲ್ಲಿರುವ ಹಮೀದ್ ಎಂಬವರಿಗೆ ನಿಯಮಿತ ಜಾಮೀನು ಮತ್ತು ಎರಡನೇ ಆರೋಪಿ ರಿಯಾಝ್ ಮತ್ತು ಮೂರನೇ ಆರೋಪಿ ಅರ್ಷಾದ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.ಸದ್ರಿ ಪ್ರಕರಣ ಕಳೆದ ಫೆಬ್ರವರಿ 5 ರಂದು ಮಾಚಾರಿನಲ್ಲಿ ನಡೆದಿತ್ತು. ಈ ಪ್ರಕರಣದಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಇನ್ನೋರ್ವ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುತ್ತಾನೆ.

ಎ.21ರಂದು ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಇದ್ದ ಪೀಠವು ಈ ಜಾಮೀನು ಮಂಜೂರು ಮಾಡಿತು.ಆರೋಪಿಗಳ ಪರ ಹೈಕೋರ್ಟ್ ವಕೀಲರುಗಳಾದ ಮುಸ್ತಫಾ ಬೆಳ್ತಂಗಡಿ, ಅನ್ವರ್ ಕೆ.ಪಿ ಕುಪ್ಪೆಟ್ಟಿ ಮತ್ತು ಮೋನಿಸ್ ಸಾಹುಕರ್ ವಾದವನ್ನು ಮಂಡಿಸಿದ್ದಾರೆ.

Related posts

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರ

Suddi Udaya

ಕರ್ನಾಟಕ ಮಿನಿ ಕ್ರೀಡಾಕೂಟ ಅಥ್ಲೆಟಿಕ್ಸ್ ಸ್ಪರ್ಧೆ : 100 ಮೀ. ಓಟದಲ್ಲಿ ಚಿನ್ನ ಗೆದ್ದ ಅದ್ವಿಕಾ ಕೆಪಿ

Suddi Udaya

ತೋಟತ್ತಾಡಿ ಗ್ರಾಮ ಸಮಿತಿ ಹಾಗೂ ಬೂತ್ ಸಮಿತಿಗಳ ವತಿಯಿಂದ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡರಿಗೆ ಸನ್ಮಾನ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಇದರ 8 ನೇ ವಾರ್ಷಿಕ ಹಾಗೂ 3 ನೇ ಸನದುದಾನ ಮಹಾ ಸಮ್ಮೇಳನ

Suddi Udaya

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!